ಕರ್ನಾಟಕ

ಡಿಕೆಶಿ ಸೇಫ್; ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಪ್ಪಿದ ಅನಾಹುತ

Pinterest LinkedIn Tumblr


ಮಂಡ್ಯ: ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೈಲಟ್ ಸಮಯಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದ ಘಟನೆ ಶುಕ್ರವಾರ ನಾಗಮಂಗಲದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಡಿಕೆಶಿ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದ ವೇಳೆ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗುತ್ತಿದ್ದ ವೇಳೆಯಲ್ಲಿಯೇ ಜನರು ಏಕಾಏಕಿ ಹೆಲಿಪ್ಯಾಡ್ ನತ್ತ ನುಗ್ಗಿದ್ದರು. ಇದನ್ನು ಗಮನಿಸಿದ ಪೈಲಟ್ ಕೂಡಲೇ ಹೆಲಿಕಾಪ್ಟರ್ ಅನ್ನು ಟೇಕಾಫ್ ಮಾಡಿರುವುದಾಗಿ ವರದಿ ವಿವರಿಸಿದೆ.

ಪೊಲೀಸರು ತಕ್ಷಣ ಜನರನ್ನು ಚದುರಿಸಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಲು ಅನುವು ಮಾಡಿ ಕೊಟ್ಟಿರುವುದಾಗಿ ವರದಿ ತಿಳಿಸಿದೆ.

-ಉದಯವಾಣಿ

Comments are closed.