ಕರ್ನಾಟಕ

ಅಣ್ಣ,ಅತ್ತಿಗೆಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆ ಮಾಡಿಕೊಂಡ

Pinterest LinkedIn Tumblr


ಮಡಿಕೇರಿ: ಇಲ್ಲಿನ ಕಿಗ್ಗಾಲು ಗ್ರಾಮದಲ್ಲಿ ವ್ಯಕ್ತಿಯೋರ್ವ ಅಣ್ಣ , ಅತ್ತಿಗೆಯನ್ನು ಗುಂಡಿಕ್ಕಿ ಬರ್ಬರ ವಾಗಿ ಹತ್ಯೆಗೈದು ಬಳಿಕ ತಾನೂ ಸ್ವಯಂ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ತಮ್ಮಯ್ಯ ಎಂಬಾತ ಅಣ್ಣ ದೇವಯ್ಯ (54) ಮತ್ತು ಪ್ರೇಮ(48)ರನ್ನು ಗುಂಡಿಕ್ಕಿ ಹತ್ಯೆಗೈದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಚಿಂತಾಜನಕ ಸ್ಥಿತಿಯಲ್ಲಿದ್ದ ತಮ್ಮಯ್ಯನನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸಹೋದರರ ನಡುವೆ ನಿರಂತರ ಜಗಳವಾಗುತ್ತಿತ್ತು ಎಂದು ವರದಿಯಾಗಿದೆ.

ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

-ಉದಯವಾಣಿ

Comments are closed.