ಆನೇಕಲ್: ರಾಜ್ಯದಲ್ಲಿ ಬಹುಜನ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದಲ್ಲಿ ಜೆಡಿಎಸ್ ಆಯೋಜಿಸಿದ್ದ “ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮ ಹಾಗೂ ಪಕ್ಷದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬಿಎಸ್ಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಆ ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ಇನ್ನು ಎರಡು ಮೂರು ದಿನದಲ್ಲಿ ಮೈತ್ರಿಯ ಬಗ್ಗೆ ಎರಡೂ ಪಕ್ಷಗಳು ಅಧಿಕೃತವಾಗಿ ಘೋಷಿಸಲಿವೆ ಎಂದು ಅವರು ಹೇಳಿದರು.
-ಉದಯವಾಣಿ
Comments are closed.