ಕರ್ನಾಟಕ

ತೊಗಾಡಿಯಾರ ಬದಲು ಅಕ್ಬರುದ್ದೀನ್ ಓವೈಸಿಯನ್ನು ಎನ್‍ಕೌಂಟರ್ ಮಾಡಿ: ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ

Pinterest LinkedIn Tumblr

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪುರದ ರಾಯ್ಕರ ಭವನದಲ್ಲಿ ಪ್ರವೀಣ್ ಭಾಯ್ ತೊಗಾಡಿಯಾ ಅಭಿಮಾನಿ ಬಳಗ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಅವರು, ಹಿಂದೂಸ್ತಾನ್ ದಲ್ಲಿಯೇ ಹಿಂದೂ ಹೋರಾಟಗಾರರನ್ನು ಎನ್ ಕೌಂಟರ್ ಮಾಡಲು ಮುಂದಾಗಿದ್ದು ದುರಂತ. ತೊಗಾಡಿಯಾ ಅವರ ಎನ್ ಕೌಂಟರ್ ಮಾಡುವ ಬದಲು ಹಿಂದು ವಿರೋಧಿ ಓವೈಸಿ ಎನ್‍ಕೌಂಟರ್ ಮಾಡಬೇಕಿತ್ತು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಹಿಂದೂ ಸಮಾಜವನ್ನು ಬಳಸಿಕೊಂಡು ಬಿಜೆಪಿ ಅಧಿಕಾರ ಹಿಡಿದಿದೆ. ಈಗ ಹಿಂದು ಹೋರಾಟಗಾರ ತೆಲೆಯ ಮೇಲೆ ಕಾಲಿಟ್ಟು ಬಿಜೆಪಿ ಅಧಿಕಾರ ಮಾಡುತ್ತಿದೆ. ನಮ್ಮ ಹೋರಾಟವನ್ನು ಬಳಸಿಕೊಂಡು ಅಧಿಕಾರ ಹಿಡಿದಿರುವ ಬಿಜೆಪಿಗೆ ತಕ್ಕ ಪಾಠ ಕಲಿಸುವ ಕಾಲ ಬಂದಿದೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಿಜೆಪಿಯ ದರ್ಪ ಹಾಗೂ ದುರಾಡಳಿತ ಕಾರಣವಾಗಿದೆ. ಕಳೆದ 50 ವರ್ಷದಲ್ಲಿ ಕಾಂಗ್ರೆಸ್ ಲೂಟಿ ಮಾಡಿದಕ್ಕಿಂತ ಹೆಚ್ಚು 5 ವರ್ಷದಲ್ಲಿ ಬಿಜೆಪಿ ಅವರು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

Comments are closed.