ಕರ್ನಾಟಕ

ವೇಶ್ಯಾವಾಟಿಕೆ: ತುಮಕೂರು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಸ್ಪೆಂಡ್‌!

Pinterest LinkedIn Tumblr


ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿ ಬಿದ್ದು ಬಂಧನಕ್ಕೊಳಗಾಗಿರುವ ತುಮಕೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮಕೃಷ್ಣಯ್ಯನನ್ನು ಕಾಂಗ್ರೆಸ್‌ ಪಕ್ಷದಿಂದ ಭಾನುವಾರ ಉಚ್ಛಾಟನೆ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ರಾಮಕೃಷ್ಣಯ್ಯರನ್ನು ಉಚ್‌ಛಾಟನೆ ಮಾಡಿ ಚುನಾವಣೆ ವೇಳೆ ಪಕ್ಷಕ್ಕಾಗುವ ಮುಜುಗರದಿಂದ ಪಾರಾಗಲು ಯತ್ನಿಸಿದ್ದಾರೆ.

ಶನಿವಾರ ಪೀಣ್ಯ ಠಾಣೆ ವ್ಯಾಪ್ತಿಯ ಚಿಕ್ಕಬಿದರಕಲ್ಲಿನ ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ತುಮಕೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ರಾಮಕೃಷ್ಣಯ್ಯ ಹಾಗೂ ಇತರರನ್ನು ಬಂಧಿಸಿದ್ದರು.

ಪೊಲೀಸರು ರಾಮಕೃಷ್ಣಯ್ಯ ಜತೆ ರಾಜು, ರಾಮಕೃಷ್ಣ ಎಂಬುವವರನ್ನು ಬಂಧಿಸಿದ್ದಾರೆ. ಈ ಸಂಬಂಧ ಸಿಸಿಬಿ ಪೊಲೀಸರು ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

-ಉದಯವಾಣಿ

Comments are closed.