ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ ದುರಂತ: ಒಬ್ಬ ಸಾವು; 20ಕ್ಕು ಹೆಚ್ಚು ಮಂದಿ ಸಿಲುಕಿರುವ ಶಂಕೆ ?

Pinterest LinkedIn Tumblr

ಬೆಂಗಳೂರು: ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತವಾಗಿ ಅವಶೇಷಗಳ ಅಡಿಯಲ್ಲಿ 10ರಿಂದ 20 ಮಂದಿ ಸಿಲುಕಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದವರ ಪೈಕಿ ಒಬ್ಬ ಮೃತಪಟ್ಟಿರುವುದಾಗಿ ವರದಿಯಾಗಿದೆ.

ನಗರದ ಸರ್ಜಾಪುರ ರಸ್ತೆಯ ಕಸುವನಹಳ್ಳಿಯಲ್ಲಿ ಗುರುವಾರ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈಗಾಗಲೇ ಎಂಟು ಜನರನ್ನು ರಕ್ಷಿಸಲಾಗಿದೆ.

Comments are closed.