ಬೆಂಗಳೂರು: ಯುವಕನ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿರುವ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಪುತ್ರನ ಪತ್ತೆಗೆ ಎಸಿಪಿ ಮಂಜುನಾಥ್ ನೇತೃತ್ವದಲ್ಲಿ 2 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಆರೋಪಿ ಮಹಮ್ಮದ್ ನಲಪಾಡ್ನನ್ನು ತಕ್ಷಣ ಬಂಧಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಹ್ಯಾರಿಸ್ ಪುತ್ರನ ಕೃತ್ಯ ಖಂಡನೀಯ
ಹ್ಯಾರಿಸ್ ನನ್ನ ಸ್ನೇಹಿತ, ಆದರೆ ಅವರ ಮಗ ಮಹಮ್ಮದ್ ನಲಪಾಡ್ ಹಲ್ಲೆ ಮಾಡಿರುವುದನ್ನು ಖಂಡಿಸುತ್ತೇನೆ. ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಂಸದ ಪಿ.ಸಿ. ಮೋಹನ್ ತಿಳಿಸಿದ್ದಾರೆ.
Comments are closed.