ಕರ್ನಾಟಕ

ಅನಂತಕುಮಾರ್, ಬಿಜೆಪಿಯವರು ಮೋದಿಯ ಗಂಜಿ ಗಿರಾಕಿಗಳು: ರಾಮಲಿಂಗಾ ರೆಡ್ಡಿ

Pinterest LinkedIn Tumblr


ಬೆಂಗಳೂರು: ಕೇಂದ್ರದ ಜನರ ತೆರಿಗೆ ಹಣ ನೆಕ್ಕುತ್ತಿರುವ ಸಚಿವ ಅನಂತಕುಮಾರ್ ಮತ್ತವರ ತಂಡ ಬಿಜೆಪಿಯವರು ಮೋದಿಯ ಗಂಜಿ ಗಿರಾಕಿಗಳು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಸಚಿವ ಅನಂತಕುಮಾರ್ ಅವರ ಮಾತಿಗೆ ತಿರುಗೇಟು ನೀಡಿದ್ದಾರೆ. ಅಲ್ಲದೇ, ಕನ್ನಡ ಕುರಿತು ವಿವಾದಾತ್ಮಕ ಹೇಳಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿರುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

‘ದಕ್ಷಿಣ ಕನ್ನಡ, ಶಿವಮೊಗ್ಗ ಉತ್ತರ ಕನ್ನಡ ಈ ಮೂರು ಜಿಲ್ಲೆ ಬಿಟ್ಟರೆ ಉಳಿದವರಿಗೆ ಶುದ್ದ ಕನ್ನಡ ಮಾತಾನಾಡುವ ಯೋಗ್ಯತೆ ಇಲ್ಲ’ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ ಯೋಜನೆಯಡಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಈ ರೀತಿ ಹೇಳಿಕೆ ನೀಡಿದ್ದಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೆಗಡೆ ಅವರು ಹೆಗಡೆ ವಿರುದ್ಧ ಭಾನುವಾರ ತೀವ್ರ ವಾಗ್ಧಾಳಿ ನಡೆಸಿದ್ದರು.

ಇಂತಹ ವಿವಾದಾತ್ಮಕ ಹೇಳಿಕೆ ಮತ್ತು ಸಿಎಂ ಸಿದ್ದರಾಮಯ್ಯಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದನ್ನು ಖಂಡಿಸಿದ ರಾಮಲಿಂಗಾ ರೆಡ್ಡಿ ಹೆಗಡೆ ಅವರ ವಿರುದ್ಧ ಸೈಬರ್ ಕ್ರೈಂ ಪ್ರಕರಣ ದಾಖಲಿಸಲು ಸೂಚಿಸುವುದಾಗಿ ತಿಳಿಸಿದರು.

Comments are closed.