ಬೆಂಗಳೂರು: ಶಾಸಕ ಎನ್.ಎ.ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದ ವಿದ್ವತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ನಗರದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್ನ ಮೂಗಿನ ಮೂಳೆ ಮುರಿದು ಮುಖ ಊದಿಕೊಂಡಿದೆ. ಶಸ್ತ್ರಚಿಕಿತ್ಸೆ ಮಾಡದೆ ಸರಿ ಹೋಗಬಹುದು. ಎದೆ ವಾಲ್ನ ಮೂಳೆಯೂ ಮುರಿದಿದೆ. ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯ ಆನಂದ್ ತಿಳಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸರು ವಿದ್ವತ್ ಹೇಳಿಕೆ ಪಡೆಯಲು ಬಂದಿದ್ದರು. ಆತ ಮಾತನಾಡದ ಸ್ಥಿತಿಯಲ್ಲಿರುವುದರಿಂದ ಸಾಧ್ಯವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.
Comments are closed.