ಕರ್ನಾಟಕ

ಹಲ್ಲೆಗೊಳಗಾದ ವಿದ್ವತ್ ಆರೋಗ್ಯದಲ್ಲಿ ಚೇತರಿಕೆ

Pinterest LinkedIn Tumblr


ಬೆಂಗಳೂರು: ಶಾಸಕ ಎನ್.ಎ.ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದ ವಿದ್ವತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ನಗರದ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್​ನ ಮೂಗಿನ ಮೂಳೆ‌ ಮುರಿದು ಮುಖ ಊದಿಕೊಂಡಿದೆ. ಶಸ್ತ್ರಚಿಕಿತ್ಸೆ ಮಾಡದೆ ಸರಿ ಹೋಗಬಹುದು. ಎದೆ ವಾಲ್​​​ನ ಮೂಳೆಯೂ ಮುರಿದಿದೆ. ಐಸಿಯುನಲ್ಲಿಯೇ ಚಿಕಿತ್ಸೆ ‌ನೀಡಲಾಗುವುದು ಎಂದು ವೈದ್ಯ ಆನಂದ್ ತಿಳಿಸಿದ್ದಾರೆ.

ಕಬ್ಬನ್ ಪಾರ್ಕ್ ಪೊಲೀಸರು ವಿದ್ವತ್​ ಹೇಳಿಕೆ ಪಡೆಯಲು ಬಂದಿದ್ದರು. ಆತ ಮಾತನಾಡದ ಸ್ಥಿತಿಯಲ್ಲಿರುವುದರಿಂದ ಸಾಧ್ಯವಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.

Comments are closed.