ಕರ್ನಾಟಕ

ಹ್ಯಾರಿಸ್‌ ಪುತ್ರನ ಹಲ್ಲೆ ಪ್ರಕರಣ: ರಾಜ್ಯಪಾಲರಿಗೆ ಬಿಜೆಪಿ ದೂರು

Pinterest LinkedIn Tumblr


ಬೆಂಗಳೂರು : ಶಾಸಕ ಎನ್‌ ಎ ಹ್ಯಾರಿಸ್‌ಪುತ್ರನಿಂದ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಡಿಸಿಎಂ ಆರ್‌ ಅಶೋಕ್‌ ನೇತೃತ್ವದಲ್ಲಿ ಇಂದು ಗುರುವಾರ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜೂಭಾಯಿ ವಾಲಾಗೆ ದೂರು ನೀಡಿದರು.

ಬೆಂಗಳೂರಿನಲ್ಲಿ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ; ಜನರಿಗೆ ರಕ್ಷಣೆಯೇ ಇಲ್ಲವಾಗಿದೆ; ಕಾಂಗ್ರೆಸ್‌ ನಾಯಕರ ಗೂಂಡಾಗಿರಿ ಹೆಚ್ಚುತ್ತಿದೆ ಎಂದು ದೂರಿರುವ ಬಿಜೆಪಿ ನಿಯೋಗ, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

ಈ ನಡುವೆ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಮಾರಣಾಂತಿಕ ಹಲ್ಲೆಗೆ ಗುರಿಯಾಗಿರುವ ವಿದ್ವತ್‌ ರನ್ನು ಕಾಣಲು ಹಲವು ಗಣ್ಯರು ಆಸ್ಪತ್ರೆಗೆ ತೆರಳಿದರು. ನಟ ಶಿವರಾಜ್‌ ಕುಮಾರ್‌ ಕೂಡ ಗಣ್ಯರಲ್ಲಿ ಒಬ್ಬರಾಗಿದ್ದರು.

-ಉದಯವಾಣಿ

Comments are closed.