ರಾಯಚೂರು: ಸಿಂಧನೂರು ತಾಲೂಕಿನ ಆರ್ ಎಚ್ ಕ್ಯಾಂಪ್ ನಂ.4ರಲ್ಲಿ ಉಪನ್ಯಾಸಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ್ದರಿಂದ ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ಜರುಗಿದೆ.
ಶುಭಂಕರ್ (32) ಎನ್ನುವಾತ, ಗ್ರಾಮದ 20 ವರ್ಷದ ಯುವತಿಯ ಕೈಹಿಡಿದು ಎಳೆದಾಡಿ ಮಾನಭಂಗಕ್ಕೆ ಯತ್ನಿಸಿದ್ದಾನೆ.
ಘಟನೆಯಿಂದ ಮನನೊಂದ ಯುವತಿ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೆ ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿ ಬಂಧನವಾಗಿಲ್ಲ.
ಈ ಕುರಿತು ಗ್ರಾಮೀಣ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.
Comments are closed.