ಕರ್ನಾಟಕ

ಏಪ್ರಿಲ್‌ 15ರ ನಂತರ ರಾಜ್ಯ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ: ರಾವತ್‌

Pinterest LinkedIn Tumblr


ಹೊಸದಿಲ್ಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿಯನ್ನು ಏಪ್ರಿಲ್‌ 15ರ ನಂತರ ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣೆ ಆಯುಕ್ತ ಒ.ಪಿ. ರಾವತ್‌ ತಿಳಿಸಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾವತ್‌ ಈ ಮಾಹಿತಿ ನೀಡಿದ್ದಾರೆ.

ಮಾರ್ಚ್‌ ಅಥವಾ ಏಪ್ರಿಲ್‌ ಎರಡನೇ ವಾರದೊಳಗೆ ಬಹುತೇಕ ಎಲ್ಲ ಪರೀಕ್ಷೆಗಳು ಪೂರ್ಣಗೊಳ್ಳಲಿವೆ. ಆ ನಂತರ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು ಅವರು ಹೇಳಿದ್ದಾರೆ.

ಏಪ್ರಿಲ್‌ ಮೊದಲ ವಾರದಲ್ಲಿ ಕರ್ನಾಟಕ ಪ್ರವಾಸ ಕೈಗೊಂಡು ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಲಾಗುವುದು. ಸೂಕ್ತ ಸಲಹೆ-ಸೂಚನೆ ಪಡೆದು ಚರ್ಚೆ ನಡೆಸಿ ಎರಡನೇ ವಾರದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ರಾವತ್‌ ತಿಳಿಸಿದರು.

ಪ್ರಸ್ತಕ ಕರ್ನಾಟಕ ವಿಧಾನಸಭೆ ಅವಧಿ ಮೇ 28ಕ್ಕೆ ಪೂರ್ಣಗೊಳ್ಳಲಿದೆ.

Comments are closed.