ಕರ್ನಾಟಕ

ಕಸಾಪ ಅಧ್ಯಕ್ಷ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

Pinterest LinkedIn Tumblr


ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ವಿವಾಹಿತ ಮಹಿಳೆಯೊಬ್ಬರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ರಿಗೆ ದೂರು ನೀಡಿದ್ದಾರೆ.

ಆರೋಪಿ ಮಾಯಣ್ಣ ವಿವಾಹವಾಗುವುದಾಗಿ ನಂಬಿಸಿ, ನನ್ನ ಗಂಡನಿಂದ ಬೇರ್ಪ ಡಿಸಲು ಯತ್ನಿಸಿದ್ದರು. ಅನಂತರ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿದ ಮಹಿಳೆ ಬಿಬಿಎಂಪಿಯ ಗುತ್ತಿಗೆ ನೌಕರ ರಾಗಿದ್ದು, ಮಾಯಣ್ಣ ಗುಮಾಸ್ತನಾಗಿದ್ದ. ಘಟನೆ ಸಂಬಂಧ ಮಾಹಿತಿ ನೀಡಿರುವ ಮಾಯಣ್ಣ, ಹಣ ವಾಪಸ್ ಕೇಳಿದ್ದಕ್ಕೆ ನನ್ನ ಮೇಲೆ ಆರೋಪ ಮಾಡಿದ್ಧಾರೆ. ಜೊತೆಗೆ ಆಕೆ ನವೀನ್ ಎಂಬವನ ಜೊತೆ ಸಂಬಂಧ ಇರುವುದನ್ನು ಪ್ರಶ್ನಿಸಿದ್ದಕ್ಕೆ ನನ್ನ ವಿರುದ್ಧ ಆರೋಪ ಮಾಡಿದ್ದಾಳೆ ಎಂದು ತಿಳಿಸಿದ್ಧಾರೆ.

Comments are closed.