ಕರ್ನಾಟಕ

ಬೆಂಗಳೂರು ಉಳಿಯಬೇಕೆಂದರೆ, ಬಿಜೆಪಿಗೆ ‘ನೋ’ ಎನ್ನಿ: ಸಿದ್ದರಾಮಯ್ಯ

Pinterest LinkedIn Tumblr


ಬೆಂಗಳೂರು: ಬೆಂಗಳೂರು ಉಳಿಸಬೇಕೆಂದರೆ, ಬಿಜೆಪಿಗೆ ‘ನೋ’ ಎನ್ನಿ. ಬೆಂಗಳೂರನ್ನು ಉಳಿಸಿ ಎನ್ನುವ ಬಿಜೆಪಿಗೆ ನೈತಿಕತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ನಿರ್ಮಾಣ ಹಂತದಲ್ಲಿರುವ ಹೆಣ್ಣೂರು ಮೇಲುರಸ್ತೆ ಸೇರಿದಂತೆ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ನಾನಾ ಅಭಿವೃದ್ಧಿ ಕಾಮಗಾರಿಗೆ ಸಿದ್ದರಾಮಯ್ಯ ಭಾನುವಾರ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.

ನಿರ್ಮಾಣ ಹಂತದ ಹೆಣ್ಣೂರು ಮೇಲುರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದಕ್ಕೆ ಸ್ಥಳೀಯರು ಕೊಂಚ ಬೇಸರ ವ್ಯಕ್ತಪಡಿಸಿದರು. ಚುನಾವಣೆ ದಿನ ಹತ್ತಿರ ಬರುತ್ತಿದ್ದಂತೆ ತರಾತುರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ ಜೈಲಿಗೆ ಹೋಗಿ ಬಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡುತ್ತಾರೆ. ನಮ್ಮದು 10 ಪರ್ಸೆಂಟ್ ಕಮಿಷನ್ ಸರಕಾರ ಹಂಗಿಸುತ್ತಾರೆ. ಬೇಜವಾಬ್ದಾರಿ ಹೇಳಿಕೆ ಕೊಡುವುದು ಸರಿಯಲ್ಲ. ಯಡಿಯೂರಪ್ಪ ಸಿಎಂ ಆಗಿ ದ್ದಾಗ ಸೀರೆ, ಸೈಕಲ್ ಕೊಟ್ಟಿದ್ದರು ಎಂದು ವ್ಯಂಗ್ಯವಾಡಿದರು.

ನಂತರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಿದರು.

Comments are closed.