ಬೆಂಗಳೂರು: ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿ ಲಕ್ಷ್ಮೀ ನಾಯ್ಕ್ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಪಿ.ಸುಂದರ್ ಗೌಡ ಜೊತೆ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.
ಲಕ್ಷ್ಮೀ ನಾಯ್ಕ್ ಪೋಷಕರು ಪುತ್ರಿಯನ್ನು ಹುಡುಕಿಕೊಡುವಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲುಮಾಡಲಾಗಿದೆ.
ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿಗೆ ಮದುವೆ ನಿಶ್ಚಯವಾಗಿತ್ತು ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಶಾಸಕರ ಪುತ್ರಿ ಮಾಸ್ತಿಗುಡಿ ಚಿತ್ರ ನಿರ್ಮಾಪಕ ಪಿ ಸುಂದರ್ ಗೌಡ ಜೊತೆ ನಾಪತ್ತೆಯಾಗಿದ್ದರೆಂದು ಪೋಷಕರು ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾವು ಮದುವೆಯಾಗಲು ಹೋಗುತ್ತಿದ್ದೇವೆ: ಈ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ಪುತ್ರಿ ತಮ್ಮ ಸ್ನೇಹಿತರಿಗೆ ಕರೆಮಾಡಿ ನಾವು ಮದುವೆಯಾಗಲು ಮೈಸೂರಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದು ಬೆಳಕಿಗೆ ಬಂದಿದೆ, ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
-ಉದಯವಾಣಿ
Comments are closed.