ಕರ್ನಾಟಕ

ಎಸ್ಸೆಸ್ಸೆಲ್ಸಿ ಪ್ರೀಪರೇಟರಿ ಪ್ರಶ್ನೆ ಪತ್ರಿಕೆ ಬಯಲು

Pinterest LinkedIn Tumblr


ಜಗಳೂರು: ತಾಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ (ಪ್ರಿಪರೇಟರಿ) ಪರೀಕ್ಷೆಯ ಸಮಾಜ ವಿಜ್ಞಾನ ಪತ್ರಿಕೆ ಶುಕ್ರವಾರ ಬಯಲಾಗಿದ್ದರಿಂದ ಮಾ.13ಕ್ಕೆ ಪರೀಕ್ಷೆ ಮುಂದೂಡಲಾಗಿದೆ ಎಂದು ಕ್ಷೇತ್ರ ಶಿಕ್ಷ ಣಾಧಿಕಾರಿ ಬಿ.ಕೆ. ಈಶ್ವರಚಂದ್ರ ವಿಜಯ ಕರ್ನಾಟಕಕ್ಕೆ ಮಾಹಿತಿ ನೀಡಿದರು.

ಪಟ್ಟಣದ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಮಾತನಾಡಿ, ಮಾ.5 ರಿಂದ ಎಸ್‌ಎಸ್‌ ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಿದೆ. ಆದರೆ ಮಾ.10ರಂದು ಶನಿವಾರ ನಡೆಯಬೇಕಿದ್ದ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದರು.

ಬಂಡಲ್‌ ಒಡೆದಿಲ್ಲ: ರಾಜ್ಯ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಜಿಲ್ಲಾ ಸಮಿತಿಗೆ ರವಾನಿಸಲಾಗಿದೆ. ನಂತರ ತಾಲೂಕು ಮಟ್ಟದ ಪ್ರೌಢ ಶಾಲೆಗಳಿಗೆ ಸರಬರಾಜಾಗಿದೆ. ತಾಲೂಕಿನ 19 ಸರಕಾರಿ ಹಾಗೂ 26 ಖಾಸಗಿ ಸೇರಿದಂತೆ ಒಟ್ಟು 46 ಪ್ರೌಢ ಶಾಲೆಗಳಿಗೆ ಪ್ರಶ್ನೆ ಪತ್ರಿಕೆಯ ಬಂಡಲ್‌ಗಳನ್ನು ಕಳುಹಿಸಲಾಗಿತ್ತು. ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿಗೆ ಬಂಡಲ್‌ಗಳನ್ನು ವಾಪಸ್‌ ತರಿಸಿಕೊಂಡು ನೋಡಿದಾಗ ಯಾವುದೇ ಬಂಡಲ್‌ ಒಡೆದಿಲ್ಲ ಎಂದು ಸ್ಪಷ್ಟೀಕರಣ ನೀಡಿದರು.

ಪೊಲೀಸರಿಗೆ ದೂರು: ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆಗಳು ಜೆರಾಕ್ಸ್‌ ಅಂಗಡಿಗಳಲ್ಲಿ ಮಾರಾಟವಾಗಿರುವ ಬಗ್ಗೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗಿದೆ ಎನ್ನಲಾದ ಕೆಲವು ಜೆರಾಕ್ಸ್‌ ಅಂಗಡಿಗಳ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ಪೊಲೀಸರು ಸತ್ಯಾಂಶವನ್ನು ಶೀಘ್ರವೇ ಪತ್ತೆ ಹಚ್ಚುವರು. ಮುಂಬರುವ ದಿನಗಳಲ್ಲಿ ಈ ರೀತಿಯಾಗದಂತೆ ಎಲ್ಲ ಶಾಲೆಗಳ ಮುಖ್ಯಸ್ಥರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

Comments are closed.