ಕರ್ನಾಟಕ

ಲಿಂಗಾಯತ ಸ್ವತಂತ್ರ ಧರ್ಮದ ಶಿಪಾರಸ್ಸಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Pinterest LinkedIn Tumblr


ಸಿಂಧನೂರು: ನ್ಯಾಯಮೂರ್ತಿ ನಾಗಮೋಹನ ದಾಸ ನೇತೃತ್ವದ ಸಮಿತಿ ಸಲ್ಲಿಸಿದ ಲಿಂಗಾಯತ ಧರ್ಮ ಜಾತ್ಯಾತೀತ ಧರ್ಮ ವರದಿಯನ್ನು ರಾಜ್ಯ ಸರ್ಕಾರ. ಕೇಂದ್ರ ಸರ್ಕಾರಕ್ಕೆ ಆದಷ್ಟು ಬೇಗನೆ ಶಿಪಾರಸ್ಸು ಮಾಡುವಂತೆ ಒತ್ತಾಯಿಸಿ ಜಾಗತಿಕ ಲಿಂಗಾಯತ ಮಹಾಸಭಾದಿಂದ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಬಸವ ವೃತ್ತದಿಂದ ಆರಂಭವಾದ ಮೆರವಣಿಗೆ ನಾನಾ ವೃತ್ತಗಳಲ್ಲಿ ಸಂಚರಿಸಿ ವರದಿ ವಿರೋಧಿಸುವವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ನಂತರ ಪ್ರತಿಭಟನಾಕಾರನ್ನುದ್ದೇಶಿಸಿ ವೀರಭದ್ರಗೌಡ ಅಮರಾಪುರ ಮಾತನಾಡಿ ಇಬ್ಬರು ಸಚಿವರು ವರದಿಯನ್ನು ವಿರೋಧಿಸುತ್ತಿದ್ದಾರೆ. ಲಕ್ಷಾಂತರ ಜನರು ಸ್ವತಂತ್ರ ಧರ್ಮ ಬೇಕೆನ್ನುತ್ತಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶೀಲಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಬೇಕು ಎಂದರು. ಸರ್ಕಾರಕ್ಕೆ ಬೆಂಬಲಕ್ಕೆ ಸಚಿವರು, ನಾನಾ ಸಂಘಟನೆಗಳ ಬೆಂಬಲವಿದೆ ಎಂದರು.

Comments are closed.