ಕರ್ನಾಟಕ

ದೇವರಾಜ ಅರಸ್ ಅವರ ಮೊಮ್ಮಗ ಸೇರಿದಂತೆ 18 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಆಮ್ ಆದ್ಮಿ ಪಕ್ಷ

Pinterest LinkedIn Tumblr

ಬೆಂಗಳೂರು: ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ದೇವರಾಜ ಅರಸ್ ಅವರ ಮೊಮ್ಮಗ ಸೇರಿದಂತೆ 18 ಅಭ್ಯರ್ಥಿಗಳ ಹೆಸರನ್ನು ಆಮ್ ಆದ್ಮಿ ಪಕ್ಷ ಘೋಷಣೆ ಮಾಡಿದೆ.

ದೇವರಾಜ್ ಅರಸ್ ಅವರ ಮೊಮ್ಮಗ ಲಿಂಗರಾಜ್ ಅರಸ್ ಕೆ. ಆರ್. ಪುರಂ ನಿಂದ ನಿವೃತ್ತ ಐಎಎಸ್ ಅಧಿಕಾರಿ ರೇಣುಕಾ ವಿಶ್ವನಾಥನ್ ಅವರು ಶಾಂತಿನಗರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಆಮ್ ಆದ್ಮಿ ಪಕ್ಷದ ಪಕ್ಷದ ರಾಜ್ಯ ಘಟಕದ ಸಂಚಾಲಕ ಪೃಥ್ವಿ ರೆಡ್ಡಿ ಸರ್ವಜ್ಞನಗರಿಂದ ಸ್ಪರ್ಧಿಸಲಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ. ಜೆ. ಜಾರ್ಜ್ ವಿರುದ್ಧ ಗೆಲುವಿಗಾಗಿ ಪೈಪೋಟಿ ನಡೆಸಲಿದ್ದಾರೆ .

ಐಟಿ ಉದ್ಯೋಗಿ , ಸಾಮಾಜಿಕ ಕಾರ್ಯಕರ್ತೆ ಮಾಳವಿಕಾ ಗುಬ್ಬಿವಾಣಿ ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮುಖಂಡರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

Comments are closed.