ಕರ್ನಾಟಕ

ವೀರಶೈವ-ಲಿಂಗಾಯತ ಧರ್ಮಕ್ಕೆ ಮಾನ್ಯತೆ ಕೊಡಬೇಕು; ವೀರಶೈವ ಮಹಾಸಭಾ

Pinterest LinkedIn Tumblr


ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಸರಿಯಲ್ಲ. ಲಿಂಗಾಯತ ಮತ್ತು ವೀರಶೈವ ಎರಡೂ ಒಂದೇ. ಹೀಗಾಗಿ ವೀರಶೈವ ಲಿಂಗಾಯತ ಧರ್ಮಕ್ಕೆ ಕೇಂದ್ರ ಸರ್ಕಾರ ಮಾನ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಹೇಳಿದರು.

ಶುಕ್ರವಾರ ಅಖಿಲ ಭಾರತ ವೀರಶೈವ ಮಹಾಸಭಾದ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕೆಂಬ ರಾಜ್ಯ ಸರ್ಕಾರದ ಶಿಫಾರಸನ್ನು ಖಂಡಿಸುವ ಸೇರಿದಂತೆ ಹಲವು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ವೀರಶೈವ ಸಮಾಜವನ್ನು ಒಡೆಯುವುದು ಸರಿಯಲ್ಲ. ವೀರಶೈವ ಲಿಂಗಾಯತರು ಮುಸ್ಲಿಮರಲ್ಲಿ ಶಿಯಾ ಸುನ್ನಿ ಇದ್ದಂತೆ. ವೀರಶೈವ, ಲಿಂಗಾಯತ ಎಂಬ ಭೇದ ನಮ್ಮಲ್ಲಿ ಇಲ್ಲ ಎಂದು ತಿಳಿಸಿದರು.

-ಉದಯವಾಣಿ

Comments are closed.