ಕರ್ನಾಟಕ

ಮದುವೆಗೆ ಯುವಕನ ಒತ್ತಾಯ: ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ

Pinterest LinkedIn Tumblr


ಮೈಸೂರು: ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ದ್ವಿತೀಯ ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದ ಪವಿತ್ರಾ (18) ಮೃತ ದುರ್ದೈವಿ. ನಂಜನಗೂಡು ತಾಲೂಕಿನ ಚನ್ನಪಟ್ಟಣದಲ್ಲಿ ಘಟನೆ ನಡೆದಿದ್ದು, ಸುರೇಶ್​ ಎಂಬಾತ ತನ್ನನ್ನು ಮದುವೆಯಾಗುವಂತೆ ಯುವತಿಯನ್ನು ಪೀಡಿಸುತ್ತಿದ್ದದ್ದೇ ಯುವತಿ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಬಸ್​ನಲ್ಲಿ ಕಾಲೇಜಿಗೆ ಹೋಗಿ ಬರುವಾಗ ಮದುವೆಯಾಗದಿದ್ದರೆ ಮಾನಹಾನಿ ಮಾಡುದಾಗಿ ಯುವಕ ಬೆದರಿಕೆ ಹಾಕಿದ್ದಾನೆ. ಇದರಿಂದ ಮನನೊಂದ ಪವಿತ್ರಾ ಸೀಮೆಎಣ್ಣೆ ಸುರಿದುಕೊಂಡಿದ್ದಾಳೆ. ಸುಟ್ಟಗಾಯಗಳಾಗಿದ್ದ ಪವಿತ್ರಾಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಉಪಯೋಗವಾಗಿಲ್ಲ.

ಸಾವಿಗೂ ಮುನ್ನ ಸುರೇಶ್​ ಕಿರುಕುಳದ ಮಾಹಿತಿಯನ್ನು ನೀಡಿದ್ದರಿಂದ ಪೋಷಕರು ಹುಲ್ಲಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Comments are closed.