ಕರ್ನಾಟಕ

ಸರಕಾರ ರಚಿಸಲು ಅವಕಾಶ ನೀಡುವಂತೆ ರಾಜ್ಯಪಾಲರನ್ನು ಭೇಟಿಯಾಗಲು ಮುಂದಾದ ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ಸರಕಾರ ರಚಿಸಲು ಅವಕಾಶ ನೀಡುವಂತೆ ಕೋರಿ ರಾಜ್ಯಪಾಲರನ್ನು ಭೇಟಿಯಾಗಲು ಬಿಜೆಪಿ ನಾಯಕ ಯಡಿಯೂರಪ್ಪ ಮುಂದಾಗಿದ್ದಾರೆ.

ರಾಜ್ಯದ ಜನತೆ ಕಾಂಗ್ರೆಸ್ ಅನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದಾರೆ. ಆದರೂ ಕಾಂಗ್ರೆಸ್ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಆರೋಪಿಸಿದ್ದಾರೆ.

ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ರಾಜ್ಯದ ಜನತೆ ಬದಲಾವಣೆ ಬಯಸಿ ಬಿಜೆಪಿಗೆ ಜನಾದೇಶ ನೀಡಿದ್ದಾರೆ. ಆದರೆ ಕಾಂಗ್ರೆಸ್ – ಜೆಡಿಎಸ್ ಜನಾದೇಶಕ್ಕೆ ವಿರುದ್ಧವಾಗಿ ವಾಮ ಮಾರ್ಗದಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿವೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಬಿಜೆಪಿಗೆ ನೀಡಿರುವ ಬೆಂಬಲಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ಬಿಎಸ್ ವೈ ಹೇಳಿದರು. ಆದರೆ ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವುದಕ್ಕೆ ಪ್ರಯತ್ನಿಸುತ್ತಿರುವುದನ್ನು ವಿರೋಧಿಸುತ್ತೇನೆ ಎಂದರು.

Comments are closed.