ಕರ್ನಾಟಕ

ಶಾಸಕ ಆನಂದ್‌ ಸಿಂಗ್‌ ವಿರುದ್ಧ ‘ಇಡಿ’ ಛೂ ಬಿಟ್ಟ ಬಿಜೆಪಿ: ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ

Pinterest LinkedIn Tumblr

ಬೆಂಗಳೂರು: ಬಿಜೆಪಿಯು ಶಾಸಕ ಆನಂದ್‌ ಸಿಂಗ್‌ ವಿರುದ್ಧ ಜಾರಿ ನಿರ್ದೇಶನಾಲಯವನ್ನು (ಇಡಿ) ಛೂ ಬಿಟ್ಟಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.

ನಗರದಲ್ಲಿ ಗುರುವಾರ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಂದಿನ ನಡೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.

ಬಿಜೆಪಿಯ ದಮನಕಾರಿ ನೀತಿಯನ್ನು ಪ್ರತಿಭಟಿಸಬೇಕು ಎಂದ ಅವರು, ಬಿಜೆಪಿಗೆ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು 15 ದಿನ ಕಾಲಾವಕಾಶ ನೀಡಿರುವುದು ಏಕೆ? ಎಂದ ಅವರು ಪ್ರಶ್ನಿಸಿದರು.

ಬಿಜೆಪಿಯಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ಸಂವಿಧಾನಿಕ ಸಂಸ್ಥೆಗಳ ದುರುಪಯೋಗವಾಗುತ್ತಿದೆ ಎಂದು ಅವರು ಆಪಾದಿಸಿದರು.

Comments are closed.