ಕರ್ನಾಟಕ

ರಾಜ್ಯದಲ್ಲಿ ಸರ್ಕಾರ ಉಳಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸುತ್ತಿರುವ ಬಿಜೆಪಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಪಕ್ಷ ಕಾಂಗ್ರೆಸ್​ ಮತ್ತು ಜೆಡಿಎಸ್​ ಶಾಸಕರನ್ನು ಸೆಳೆಯಲು ಮೆಗಾ ಪ್ಲ್ಯಾನ್​ ರೂಪಿಸುತ್ತಿದೆ.

ಪ್ರಮುಖವಾಗಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್​ ಕರ್ನಾಟಕ ಭಾಗದ ಕಾಂಗ್ರೆಸ್​ನ ಮತ್ತು ಜೆಡಿಎಸ್​ನ ಲಿಂಗಾಯತ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಯೋಜನೆ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ತಮ್ಮ ಆಪ್ತ ಶಾಸಕರಿಗೆ ಮತ್ತು ಮುಖಂಡರಿಗೆ 10 ಶಾಸಕರ ಪಟ್ಟಿ ನೀಡಿದ್ದು, ಅವರ ಮನವೊಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಗುರುವಾರ ರಾತ್ರಿ ಯಡಿಯೂರಪ್ಪ ಅವರು ಖಾಸಗಿ ಹೋಟೆಲ್​ನಲ್ಲಿ ಉಳಿದುಕೊಂಡು ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಿದ್ದಾರೆ. ಪಕ್ಷಕ್ಕೆ ಬರುವ ಶಾಸಕರಿಗೆ ಸಚಿವ ಸ್ಥಾನ ನೀಡುವ ಆಮಿಷ ತೋರಿಸಲಾಗುತ್ತಿದೆ. ಇದನ್ನು ಹೊರತುಪಡಿಸಿ ಪ್ಲ್ಯಾನ್​ -ಬಿಯನ್ನೂ ಸಹ ಬಿಜೆಪಿ ಸಿದ್ಧಪಡಿಸಿದ್ದು, ಬಹುಮತ ಸಾಬೀತು ಪಡಿಸಲು ರಣತಂತ್ರ ಹೆಣೆಯುತ್ತಿದೆ ಎಂದು ತಿಳಿದು ಬಂದಿದೆ.

Comments are closed.