ಕರ್ನಾಟಕ

ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಕುರುವೈ ಬೆಳೆಗೆ ನೀರು ಕೇಳಿದ ಕಮಲ ಹಾಸನ್‌!

Pinterest LinkedIn Tumblr


ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ಉಭಯ ರಾಜ್ಯಗಳ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. ನಮಗೆ ಎರಡೂ ರಾಜ್ಯಗಳ ರೈತರೇ ಮುಖ್ಯ ಎಂದು ಮಕ್ಕಳ್‌ ನೀಥಿ ಮಯ್ಯ ಪಕ್ಷದ ನಾಯಕ, ಚಿತ್ರನಟ ಕಮಲ ಹಾಸನ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಮಲ ಹಾಸನ್‌ ಸಮಾಲೋಚನೆ ನಡೆಸಿದರು. ನಂತರ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಎರಡೂ ರಾಜ್ಯಗಳ ರೈತರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಉಭಯ ಸರಕಾರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ನಾನು ಇಲ್ಲಿ ರಾಜಕೀಯ ಚರ್ಚಿಸಲು ಬಂದಿಲ್ಲ. ಕೇವಲ ರೈತರ ಪರವಾಗಿ ದನಿಯಾಗಿ ಬಂದಿದ್ದೇನೆ. ನಮಗೆ ತಮಿಳುನಾಡಿನ ರೈತರು ಹಾಗೂ ಕರ್ನಾಟಕದ ರೈತರ ಹಿತಾಸಕ್ತಿ ಮುಖ್ಯ ಎಂದು ಕಮಲ ಹಾಸನ್‌ ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದು ನಿಜಕ್ಕೂ ಖುಷಿ ತಂದಿದೆ ಎಂದು ಕಮಲ ಹಾಸನ್‌ ತಿಳಿಸಿದರು.

ಕಾಲ ಚಿತ್ರ ವಿವಾದದ ಬಗ್ಗೆ ನಾನು ಯಾವುದೇ ಚರ್ಚೆ ಮಾಡಿಲ್ಲ. ಅದಕ್ಕಾಗಿ ವಾಣಿಜ್ಯ ಮಂಡಳಿ ಇದೆ.ಅವರು ನೋಡಿಕೊಳ್ಳುತ್ತಾರೆ. ನಾನು ತಮಿಳುನಾಡು ಜನತೆಯ ಪರವಾಗಿ ಬಂದಿದ್ದೇನೆ.ಕುರುವೈ ಬೆಳೆಗೆ ನೀರು ಬೇಕು. ಅದಕ್ಕಾಗಿ ಜನರಿಗಗಾಗಿ ಸೇತುವೆ, ಅಳಿಲು ಕೊನೆಗೆ ಜನರ ಚಪ್ಪಲಿಯಾಗಲೂ ಸಿದ್ದ.. ನಮ್ಮದು ಚಿಕ್ಕ ಪಕ್ಷ… ತಮಿಳು ನಾಡು ಜನತೆಗಾಗಿ ನಾನು ಕರ್ನಾಟಕ-ತಮಿಳುನಾಡು ಸರ್ಕಾರಗಳ ನಡುವೆ ಮಧ್ಯಸ್ಥಿಕೆಗೆ ನಾನು ಸಿದ್ದ. ನಮ್ಮಕುಟುಂಬದಲ್ಲೂ ವಕೀಲರಿದ್ದಾರೆ. ಎಲ್ಲರೂ ಸಹ ಕಾವೇರಿ ವಿವಾದ ಸೌಹಾರ್ದಯುತವಾಗಿ ಬಗೆ ಹರಿಸಿಕೊಳ್ಳಬೇಕೆಂದೆ ಸಲಹೆ ನೀಡಿದ್ದಾರೆ ಎಂದರು ಕಮಲ ಹಾಸನ್‌ ಹೇಳಿದರು.

ಕಾವೇರಿ ವಿವಾದ ಇಂದು ನಿನ್ನೆಯದಲ್ಲ..ಎರಡೂ ರಾಜ್ಯಗಳ ರೈತರ ನಡುವೆ ಕಾವೇರಿ ನೀರು ಹಂಚಿಕೆಯಾಗಬೇಕು.ಈ ಸಂಬಂಧ ತಮಿಳುನಾಡು ಸರ್ಕಾರದ ಜತೆಯೂ ಮಾತುಕತೆಗೆ ನಾನು ಸಿದ್ದ.ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ ಸಮಾನವಾಗಿ ಹೋಗಬೇಕು ಎಂದು ಕುಮಾರಸ್ವಾಮಿ ತಿಳಿಸಿದರು.

Comments are closed.