ಕರ್ನಾಟಕ

ಕಾಂಗ್ರೆಸ್ ನ​ ಹಿರಿಯ ನಾಯಕರ ದಿಲ್ಲಿ ಭೇಟಿಯನ್ನು ಹೈಕಮಾಂಡ್ ರದ್ದುಪಡಿಸಿದ್ದು ಯಾಕೆ ಗೊತ್ತಾ?

Pinterest LinkedIn Tumblr


ಬೆಂಗಳೂರು: ಮೈತ್ರಿ ಸರ್ಕಾರದ ಸಚಿವ ಸಂಪುಟ ಕರಸತ್ತು ತೀವ್ರವಾಗಿರುವ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಭೇಟಿ ಮಾಡಲು ಯೋಜನೆ ರೂಪಿಸಿದ್ದರು. ಆದರೆ ಅವರ ದೆಹಲಿ ಭೇಟಿ ದಿಢೀರ್​ ರದ್ದಾಗಿದೆ.

ಇಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಅವರು ರಾಹುಲ್​ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು.

ಆದರೆ ಕಾಂಗ್ರೆಸ್​ ಹಿರಿಯ ನಾಯಕ ಗುಲಾಂ ನಬಿ ಆಜಾದ್​ ಮತ್ತು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ನೀವು ದೆಹಲಿಗೆ ಬರುವುದು ಬೇಡ ಎಂದು ಸಂದೇಶ ರವಾನಿಸಿದ್ದಾರೆ. ಜತೆಗೆ ಇಂದು ರಾಹುಲ್​ ಜತೆ ನಾವೇ ಮಾತನಾಡಿ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ದೆಹಲಿಗೆ ಕೈ ಹಿರಿಯ ನಾಯಕರು ಬರುವುದರಿಂದ ಸಚಿವ ಸ್ಥಾನದ ಇತರ ಆಕಾಂಕ್ಷಿಗಳೂ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೀವು ದೆಹಲಿಗೆ ಬರುವುದು ಬೇಡ ಎಂದು ಹೈಕಮಾಂಡ್​ ಸ್ಪಷ್ಟ ಸಂದೇಶ ನೀಡಿದೆ ಎಂದು ತಿಳಿದು ಬಂದಿದೆ.

Comments are closed.