ಕರ್ನಾಟಕ

ಪ್ರಿಯತಮೆ ದಕ್ಕದಲಿಲ್ಲವೆಂದು ಶಾಲೆಗೆ ಬೆಂಕಿ ಇಟ್ಟಿದ್ದ ಪ್ರೇಮಿ ಬಂಧನ!

Pinterest LinkedIn Tumblr


ಚಿಕ್ಕೂಡಿ: ಲವ್ವರ್ ಸಿಗಲಿಲ್ಲ ಅಂತ ಶಾಲೆಗೆ ಬೆಂಕಿ ಇಟ್ಟಿದ್ದ ಪಾಗಲ್ ಪ್ರೇಮಿಯನ್ನು ಬಂಧಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ.

ಉಮೇಶ್ ಅಚಕನಹಳ್ಳಿ(18) ಬಂಧಿತ ಆರೋಪಿ. ಕಳೆದ ಜೂನ್ 4ರಂದು ಉಮೇಶ್ ಶಾಲೆಗೆ ಬೆಂಕಿ ಇಟ್ಟಿದ್ದನು. ಪ್ರಕರಣದ ದಿಕ್ಕು ತಪ್ಪಿಸಲು ತಾನೇ ಬೇರೆಯವರ ಹೆಸರಲ್ಲಿ ಲೆಟರ್ ಬರೆದಿದ್ದ. ಸದ್ಯ ಪೊಲೀಸ್ ತನಿಖೆ ವೇಳೆ ಎಲ್ಲ ಕೃತ್ಯವನ್ನು ತಾನೇ ಮಾಡಿದ್ದಾಗಿ ಉಮೇಶ್ ಒಪ್ಪಿಕೊಂಡಿದ್ದಾನೆ.

ಏನಿದು ಘಟನೆ?
ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಶಾಲೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಪಾಗಲ್ ಪ್ರೇಮಿ ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದನು. ಈ ಹಿಂದೆ ಶಾಲೆಗೆ ಬೆಂಕಿ ಇಟ್ಟಿದ್ದ ಕಿರಾತಕನಿಂದ ಶಾಲೆಯ ಕೊಠಡಿಯಲ್ಲಿ ಐದು ಲವ್ ಲೆಟರ್ ಗಳನ್ನು ಬರೆದು ಹಳೆಯ ಪ್ರೇಮಿಗಳನ್ನು ಒಂದು ಮಾಡದಿದ್ದಲ್ಲಿ ಶಾಲೆ ಧ್ವಂಸಗೊಳಿಸುವದಾಗಿ ಬೆದರಿಕೆ ಹಾಕಿದ್ದನು. ಪೊಲೀಸರು ತಮ್ಮನ್ನು ಪತ್ತೆ ಹಚ್ಚುವುದು ಅಸಾಧ್ಯ ಎಂದು ಬರೆದಿರುವ ಜೊತೆಗೆ ನಮ್ಮನ್ನು ಒಂದು ಮಾಡಿ ಎಂದು ವಿನಂತಿಸಿಕೊಂಡಿದ್ದಾನೆ. ಮತ್ತೆ ಪಾಗಲ್ ಪ್ರೇಮಿಯ ಕೃತ್ಯದಿಂದ ಶಾಲೆಯ ಆಡಳಿತ ಸಿಬ್ಬಂದಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು.

ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Comments are closed.