ಕರ್ನಾಟಕ

ಸಿದ್ದರಾಮಯ್ಯರಿಂದ ಮುಂದುವರಿದ ಪತ್ರ ಸಮರ

Pinterest LinkedIn Tumblr


ಬಾಗಲಕೋಟೆ : ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಸಮರ ಮುಂದುವರಿದಿದೆ.

ಬದಾಮಿಯಿಂದ ಚುನಾವಣೆಗೆ ಸ್ಪರ್ಧಿಸಿ ಗೆದ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ಕ್ಷೇತ್ರಕ್ಕೆ ಅಗತ್ಯವಾದ ಸೌಲಭ್ಯಗಳನ್ನು ನೀಡುವಂತೆ ಸರಕಾರಕ್ಕೆ ಪತ್ರದ ಮೂಲಕ ಆಗ್ರಹಿಸುತ್ತಿದ್ದಾರೆ.

ಬಾದಾಮಿಯಲ್ಲಿ ಎಂಜಿನಿಯರಿಂಗ್ ಕಾಲೇಜ್, ಕೆರೂರ ನಲ್ಲಿ‌ ಸರಕಾರಿ ಐಟಿಐ ಹಾಗೂ ಗುಳೇದಗುಡ್ಡ ದಲ್ಲಿ ಪಶು ವೈದ್ಯಕೀಯ ಕಾಲೇಜ್ ಆರಂಭಿಸಬೇಕು ಎಂದು ಪತ್ರಗಳಲ್ಲಿ ಒತ್ತಾಯಿಸಿದ್ದಾರೆ.

ಸರಕಾರದ ವಿರುದ್ಧ ಪತ್ರ ಸಮರ ಮುಂದುವರೆಸಿರುವ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಲ್ಲಿನ ವಿವಿಧ ಸಮಸ್ಯೆ, ಅಗತ್ಯ ಸೌಕರ್ಯಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.

ಈ ಮೊದಲು ಗುಳೇದಗುಡ್ಡ ದಲ್ಲಿ ಗಾರ್ಮೆಂಟ್ಸ್ ಪಾಕ್೯, ಬಾದಾಮಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಕೆರೆಗಳಿಗೆ ನೀರು ತುಂಬುವ ಯೋಜನೆ ಬಗ್ಗೆ ಪತ್ರ ಬರೆಸಿದ್ದರು. ಮಾಜಿ‌ ಸಿಎಂ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಆಯಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಭೆ ನಡೆಸುವಂತೆ ಸೂಚಿಸಿದ್ದರು. ಇದೀಗ ಮತ್ತೆ ಕ್ಷೇತ್ರದ ಅವಶ್ಯಕತೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವ ಕೆಲಸ ಮಾಡಿದ್ದಾರೆ.

Comments are closed.