ಬೆಂಗಳೂರು: ಹುಡುಗಿ ಚೆನ್ನಾಗಿದ್ದಾಳೆ ಎಂದು ತನ್ನ ಮೊಬೈಲ್ನಲ್ಲಿ ಫೋಟೋ ತೆಗೆದವ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಮೆಟ್ರೋ ನಿಲ್ದಾಣದಲ್ಲಿ ಸ್ನೇಹಿತೆಗಾಗಿ ಕಾಯುತ್ತಾ ನಿಂತಿದ್ದ ಯುವತಿಯ ಫೋಟೊ ಕ್ಲಿಕ್ಕಿಸಿದ ಅಲ್ಲಿನ ಒಡಿಶಾ ಮೂಲದ ಸೆಕ್ಯುರಿಟಿ ಗಾರ್ಡ್ ರಾಮಚಂದ್ರನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ವಿಚಾರಣೆ ವೇಳೆ “ಯುವತಿ ಚೆನ್ನಾಗಿದ್ದಾಳೆ” ಎಂದು ಫೋಟೊ ತೆಗೆದಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಏನಿದು ಪ್ರಕರಣ?
ನಾಗಸಂದ್ರ ಮೆಟ್ರೋ ನಿಲ್ದಾಣಕ್ಕೆ ಹಲಸೂರಿನಿಂದ ಬಂದಿದ್ದ ಯುವತಿ ತನ್ನ ಸ್ನೇಹಿತೆಗಾಗಿ ನಿಲ್ದಾಣದಲ್ಲಿ ಕಾಯುತ್ತಿದ್ದಳು. ಈ ವೇಳೆ ಆರೋಪಿ ತನ್ನ ಮೊಬೈಲ್ನಲ್ಲಿ ಸಂತ್ರಸ್ತೆಯ ಫೋಟೊಗಳನ್ನು ಕ್ಲಿಕ್ಕಿಸಲು ಆರಂಭಿಸಿದ್ದಾನೆ. ಫೋಟೊ ಸೆರೆ ಹಿಡಿಯುವಾಗ ಫ್ಲಾಶ್ ಬಂದ ಕಾರಣ ಯುವತಿಯ ಗಮನಕ್ಕೆ ಬಂದಿದೆ. ಕೂಡಲೇ ಯುವತಿ ಆತನ ಬಳಿ ಹೋಗಿ ಮೊಬೈಲ್ ನೀಡುವಂತೆ ಕೇಳಿದ್ದಾಳೆ. ಗಾಬರಿಗೊಂಡ ರಾಮಚಂದ್ರ ಅಲ್ಲಿಂದ ಕಾಲ್ಕಿತ್ತ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ
Comments are closed.