ಶಿವಮೊಗ್ಗ: ನಾನು ಅದೃಷ್ಟದ ಶಾಸಕ. ನಾನು ಶಾಸಕನಿದ್ದಾಗಲೆಲ್ಲ ಭದ್ರಾ ಜಲಾಶಯ ತುಂಬಿದೆ. ಸೋತಾಗ ತುಂಬಿಲ್ಲ ಎಂದು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿ, ನಾನು ಈ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಭದ್ರಾ ಜಲಾಶಯ ಅವಧಿಗೂ ಮೊದಲು ಭರ್ತಿಯಾಗಿದೆ ಎಂದಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗೆದ್ದಿರುವ ಏಕೈಕ ಕಾಂಗ್ರೆಸ್ ಶಾಸಕ ನಾನು. ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ನನಗೆ ಸಚಿವ ಸ್ಥಾನ ನೀಡಲು ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ. ಬೋರ್ಡ್ ಅಧ್ಯಕ್ಷ ಸ್ಥಾನ ನೀಡಿದರೆ ನಾನು ನಿರಾಕರಿಸುತ್ತೇನೆ ಎಂದು ಹೇಳಿದರು.
ಬಾಗಿನ ಅರ್ಪಣೆ ವೇಳೆ ಸಂಗಮೇಶ್ವರ್ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಟ್ರಾಫಿಕ್ ಜಾಮ್ ಆಗಿ ಜನರ ನೂಕು ನುಗ್ಗಲು ಆಗಿತ್ತು.
Comments are closed.