ಕರ್ನಾಟಕ

ಕರ್ನಾಟಕದ ಮಹದಾಯಿ ಯೋಜನೆ ಅನುಷ್ಠಾನ ತಡೆಯಲು ಮುಂದಾಗಿರುವ ಗೋವಾ

Pinterest LinkedIn Tumblr

ಬೆಳಗಾವಿ:ಮಹದಾಯಿ ನೀರು ವಿವಾದ ನ್ಯಾಯಾಧೀಕರಣ ಕರ್ನಾಟಕಕ್ಕೆ 13. 5 ಟಿಎಂಸಿ ಮಹದಾಯಿ ನದಿ ನೀರು ಹಂಚಿಕೆ ಮಾಡಿದ ಬೆನ್ನಲ್ಲೇ, ಕರ್ನಾಟಕದ ಮಹದಾಯಿ ಯೋಜನೆ ಅನುಷ್ಠಾನ ತಡೆಯಲು ಪರಿಣಾಮಕಾರಿ ಪರ್ಯಾಯ ಮಾರ್ಗಗಳನ್ನು ಗೋವಾ ಸರ್ಕಾರ ಹುಡುಕುತ್ತಿದೆ.

ಇತ್ತೀಚಿನ ಹೊಸ ಬೆಳವಣಿಗೆಯೊಂದರಲ್ಲಿ ಕಸ್ತೂರಿ ರಂಗನ್ ವರದಿ ಅಧ್ಯಯನ ನಡೆಸಿದ್ದು, ಕರ್ನಾಟಕ ಸರ್ಕಾರದ ಮಹದಾಯಿ ನದಿಯ ಜಲವಿದ್ಯುತ್ ಯೋಜನೆಗೆ ಮುಂದುವರಿಯದಂತೆ ಆಕ್ಷೇಪ ವ್ಯಕ್ತಪಡಿಸಿದೆ.

ಪ್ರಸ್ತುತ ಕರಾವಳಿ ರಾಜ್ಯದಲ್ಲಿ ಯಾವುದೇ ಪರ್ಯಾಯ ಮಾರ್ಗಗಳಿಲ್ಲ. ಕರ್ನಾಟಕ ಸರ್ಕಾರದ ಜಲವಿದ್ಯುತ್ ಯೋಜನೆಯಿಂದ ಪಶ್ಚಿಮ ಘಟ್ಟದಲ್ಲಿನ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಲಿದ್ದು, ಗೋವಾ ಮೇಲೂ ಪ್ರಭಾವ ಬೀರಲಿದೆ ಎಂದು ಗೋವಾ ಹೆಚ್ಚುವರಿ ಸಾಲಿಸಿಟರ್ ಜನರಲ್ ಆತ್ಮರಾಮ್ ನಾಡಕರ್ಣೀ ನೇತೃತ್ವದ ಕಾನೂನು ತಜ್ಞರ ಸಮಿತಿ ಆಕ್ಷೇಪಿಸಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ನ್ಯಾಯಾಧೀಕರಣದ ಹೊರಗಡೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯಲ್ಲಿ ಈ ವಿಷಯ ಸಂಬಂಧ ಚರ್ಚಿಸಲು ಹಾಗೂ ಕರ್ನಾಟಕದ ಜಲಿವಿದ್ಯುತ್ ಯೋಜನೆ ನಿರ್ಬಂಧ ಕುರಿತು ನ್ಯಾಯಾಲಯದಲ್ಲಿ ಪ್ರಶ್ನಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂಬಂತಹ ಮಾಹಿತಿಗಳು ಕೇಳಿಬರುತ್ತಿವೆ.

ಮಹದಾಯಿ ನ್ಯಾಯಾಧೀಕರಣದ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರದ ವಿರುದ್ಧ ಉನ್ನತ ನ್ಯಾಯಾಲಯದಲ್ಲಿ ಇನ್ನೂ ಒಂದೆರಡು ದಿನಗಳಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು . ಕರ್ನಾಟಕ ಸರ್ಕಾರ ಈಗಾಗಲೇ ನೀರನ್ನು ತನ್ನ ಕಡೆಗೆ ತಿರುಗಿಸಿಕೊಂಡಿರುವ ಬಗ್ಗೆ ಸಾಕ್ಷ್ಯಧಾರ ಒದಗಿಸಲಾಗುವುದು ಎಂದು ಆತ್ಮಾರಾಮ ನಾಡಕರ್ಣೀ ಹೇಳಿದ್ದಾರೆ.

ಮಹದಾಯಿ ನದಿ ವಿಚಾರದಲ್ಲಿ ಕರ್ನಾಟಕ ಗೆಲುವು ಸಾಧಿಸಿದ್ದರೂ ಗೋವಾಕ್ಕೂ ಈ ತೀರ್ಪು ಬಹುದೊಡ್ಡ ಗೆಲುವು ಎಂದು ಗೋವಾ ತಂತ್ರಜ್ಞರ ತಂಡ ಹೇಳುತ್ತಿದ್ದಾರೆ . ಕರ್ನಾಟಕ ಸರ್ಕಾರ ಒಟ್ಟಾರೇ 36.55 ಟಿಎಂಸಿ ನೀರು ಕೇಳಿತ್ತು. ಆದಾಗ್ಯೂ, ನ್ಯಾಯಾಧೀಕರಣ 13. 42 ಟಿಎಂಸಿ ನೀರು ಹಂಚಿಕೆ ಮಾಡಿತ್ತು. ಕುಡಿಯುವ ನೀರಿಗಾಗಿ 5.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿತ್ತು.

Comments are closed.