
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಈ ಬಾರಿ ಇನ್ಫೋಸಿಸ್ ಮಾಜಿ ಅಧ್ಯಕ್ಷ ನಾರಾಣಮೂರ್ತಿ ಅವರ ಪತ್ನಿ ಡಾ. ಸುಧಾ ಮೂರ್ತಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಇಂದು ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸಂಕಷ್ಟದಲ್ಲಿದೆ, ಕೆಲವೆಡೆ ಬರದ ವಾತಾವರಣ ಉಂಟಾಗಿದೆ. ಮಾಹಿತಿ ಪ್ರಕಾರ 65 ತಾಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕಾದ ಸ್ಥಿತಿಯಿದೆ. ಹೀಗಾಗಿ ಈ ಬಾರಿ ವೈಭವೀಕರಿಸುವ ದಸರಾ ಸಾಧ್ಯವಿಲ್ಲ. ಬದಲಾಗಿ ಸಂಪ್ರದಾಯಿಕ ದಸರಾ ನಡೆಯಲಿದೆ. ಈ ಕುರಿತು ದಸರ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಉತ್ಸವದಲ್ಲಿ ಸಂಪ್ರದಾಯ ಪಾಲನೆ ಮಾಡಲಾಗುತ್ತದೆ. ಜೊತೆಗೆ ಪ್ರವಾಸಿಗರ ಆರ್ಕಷಿಸುವ ದಸರಾ ನಡೆಸಲಾಗುತ್ತದೆ. ಮೆರವಣಿಗೆಯ ಉದ್ದಕ್ಕೂ ಎಲ್ಸಿಡಿ ಪರದೆ ಹಾಕಲಾಗುತ್ತದೆ ಎಂದು ತಿಳಿಸಿದರು.
Comments are closed.