ಕರ್ನಾಟಕ

ಪ್ರವಾಹ ಪೀಡಿತ ಕೊಡಗಿನಲ್ಲಿ 70 ಅಧಿಕಾರಿಗಳಿದ ಪರಿಶೀಲನೆ: ಕೃಷಿ ಸಚಿವ

Pinterest LinkedIn Tumblr


ಕಂಬಿಬಾಣೆ: ಕೊಡಗಿಗೆ ವಿಶೇಷಷ ಪ್ಯಾಕೇಜ್‌ ನೀಡುವ ಕುರಿತು ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ತಿಳಿಸಿದ್ದಾರೆ.

ಕೊಡಗಿನಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದ ಕುರಿತು ಪರಿಶೀಲನೆ ನಡೆಸಿದ ಅವರು, ಕೊಡಗಿಗೆ ವಿಶೇಷ ಆದ್ಯತೆಯನ್ನು ಸರ್ಕಾರ ಕೊಡುತ್ತಿದೆ. ಕೃಷಿ ಮಾಡುವವರಿಗೆ ಬಿತ್ತನೆ ಬೀಜ ಉಚಿತವಾಗಿ ನೀಡುತ್ತೇವೆ. ಬಿತ್ತನೆ ಬೀಜ, ಗೊಬ್ಬರ ಅಗತ್ಯ ದಾಸ್ತಾನು ಇವೆ. ಕೊಡಗಿಗೆ ವಿಶೇಷ ಪ್ಯಾಕೇಜ್‌ ಸಿದ್ದಪಡಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗುವುದು ಎಂದರು.

ಗ್ರಾಮ ಮಟ್ಟದಲ್ಲಿ ನಷ್ಟದ ಪರಿಶೀಲನೆ ಮಾಡುತ್ತಿದ್ದೇವೆ. 25 ಸಾವಿರ ಎಕರೆ ಪ್ರದೇಶದಲ್ಲಿ ಭತ್ತದ ಕೃಷಿ ನಾಶವಾಗಿದೆ. ಮುಸುಕಿನ ಜೋಳ, ಭತ್ತ ಕೃಷಿಗೆ ಹೆಚ್ಚು ಹಾನಿಯಾಗಿರುವುದು ಗೊತ್ತಾಗಿದೆ. 70 ಅಧಿಕಾರಿಗಳ ತಂಡ ಜಿಲ್ಲೆಯಲ್ಲಿ ಸಮೀಕ್ಷೆ ನಡೆಸುತ್ತಿದ್ದು, ಅಗತ್ಯ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.

Comments are closed.