ಕರ್ನಾಟಕ

ಮತದಾನ ಗುರುತು ಪತ್ರಕ್ಕೆ ಆಧಾರ್‌ ಲಿಂಕ್‌ ಮಾಡಲು ಮೋದಿಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮನವಿ

Pinterest LinkedIn Tumblr


ಮೈಸೂರು: ರಾಜ್ಯದಲ್ಲಿ ಶುಕ್ರವಾರ ಸ್ಥಳೀಯ ಸಂಸ್ಥೆ ಚುನಾವಣೆ ನಡೆದಿದ್ದು, 22 ಜಿಲ್ಲೆಗಳ 105 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ತುಮಕೂರು, ಶಿವಮೊಗ್ಗ, ಮೈಸೂರು ಮಹಾನಗರ ಪಾಲಿಕೆಗೂ ಚುನಾವಣೆ ನಡೆದಿದೆ. ಹಲವೆಡೆ ಮತದಾರರ ಪಟ್ಟಿಯಲ್ಲಿನ ಗೊಂದಲದಿಂದಾಗಿ ಕೆಲವರು ಮತವಂಚಿತರಾದರೆ ಮತ್ತೆ ಕೆಲವರು ಹೆಸರು ಇಲ್ಲದಿದ್ದರಿಂದ ಮತಚಲಾವಣೆಯಿಂದ ವಂಚಿತರಾದರು.

ಆದರೆ ಮೈಸೂರಿನಲ್ಲಿ ಮತದಾನ ಮಾಡಿದ ಸಂಸದ ಪ್ರತಾಪ್ ಸಿಂಹ, ಮತದಾರರ ಪಟ್ಟಿಯಲ್ಲಿ ದೋಷಗಳಿದ್ದು, ನಕಲಿ ಮತದಾರರಿದ್ದಾರೆ. ಹೀಗಾಗಿ ವೋಟರ್ ಐಡಿಯನ್ನು ಆಧಾರ್‌ನೊಂದಿಗೆ ಜೋಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ, ಮೈಸೂರು ನಗರಪಾಲಿಕೆಗೆ ಚುನಾವಣೆ ಮುಗಿಯಿತು. ಆದರೆ ನಕಲಿ ಮತದಾನ ತಡೆಯಲು ಸಾಧ್ಯವಾಗಿಲ್ಲ. ನಕಲಿ ಮತದಾರರ ಹೆಸರು ಪಟ್ಟಿಯಲ್ಲಿದೆ ಮತ್ತು ಅವರು ಮತದಾರರ ಗುರುತು ಚೀಟಿ ಕೂಡ ಹೊಂದಿದ್ದಾರೆ. ಆದರೆ ಅವರ ವಿಳಾಸಕ್ಕೆ ಹೋಗಿ ಪರಿಶೀಲಿಸಿದರೆ ಖಾಲಿ ಸೈಟ್ ಕಾಣಿಸುತ್ತದೆ. ಮತ್ತು 2-3 ಸದಸ್ಯರಿರುವ ಹಿಂದುಗಳ ಮನೆಗಳ ವಿಳಾಸದಲ್ಲಿ 15-20 ಮುಸ್ಲಿಂ ಮತದಾರರಿದ್ದಾರೆ. ಹೀಗಾಗಿ ನಕಲಿ ಮತದಾನ ತಡೆಯಲು ದಯವಿಟ್ಟು ವೋಟರ್ ಐಡಿಯನ್ನು ಆಧಾರ್ ಜತೆ ಜೋಡಿಸಿ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಪ್ರಧಾನಿಗೆ ಮನವಿ ಮಾಡಿದ್ದಾರೆ.

Comments are closed.