ರಾಮನಗರ: ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.
ದೀಪಾವಳಿಯ ದಿನವೇ ಪ್ರಕಟವಾಗುತ್ತಿರುವ ಫಲಿತಾಂಶದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎಂದು ಇನ್ನೂ ನಿರ್ಧರಿಸಬೇಕಾಗಿದೆ. ಆದರೆ ಈ ನಡುವೆ ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಬ್ಯಾನರ್ ಹಾಕಲಾಗಿದೆ.
ಮತ ಎಣಿಕೆಗೆ ಮುನ್ನವೇ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ನಗರದ ಅಲ್ಲಲ್ಲಿ ಬ್ಯಾನರ್ ಹಾಕಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆದ್ದಿದ್ದಾರೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.ಜೆಡಿಎಸ್ ಕಾರ್ಯಕರ್ತರು ಮತ ಎಣಿಕೆಯ ಮುನ್ನವೇ ಬ್ಯಾನರ್ ತಯಾರಿಸಿ ಅಲ್ಲಲ್ಲಿ ಪ್ರದರ್ಶಿಸಿದ್ದಾರೆ. ರಾಮನಗರದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆದಿದ್ದು ಶೇ. 71.88 ಮತದಾನವಾಗಿತ್ತು.
Comments are closed.