ಕರ್ನಾಟಕ

ಸಿಡಿಲಿಗೆ 200ಕ್ಕೂ ಹೆಚ್ಚು ಕುರಿಗಳು ಬಲಿ

Pinterest LinkedIn Tumblr


ಸೊರಬ: ತಾಲೂಕಿನ ಗುಡ್ಡೆಕೊಪ್ಪದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು 200ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.

ಕುರಿಗಳು ಮಳೆ ಬರುತ್ತಿದ್ದಂತೆ ಮರದ ಅಡಿಯಲ್ಲಿರುವ ಮರಿಗಳಿಗೆ ಹಾಲುಣಿಸಲು ಬಂದಾಗ ಸಿಡಿಲು ಬಡಿದಿದೆ. ಸಿಡಿಲಿನ ರಭಸಕ್ಕೆ ಮರದಡಿಯಲ್ಲಿದ್ದ 200ಕ್ಕೂ ಹೆಚ್ಚು ಕುರಿಗಳು ಅಸುನೀಗಿವೆ. ಕುರಿಗಾಹಿಗಳು ಸಮೀಪದಲ್ಲಿಯೇ ಇದ್ದ ತಮ್ಮ ಗುಡಿಸಲಿಗೆ ಹೋದ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುರಿಗಳು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕಡಕಲ ಗ್ರಾಮದ ಕಲ್ಲಪ್ಪ ಭೀಮಪ್ಪ ಅವಡಖಾನ್ ಎಂಬವರದ್ದು. ಸ್ಥಳಕ್ಕೆ ತಾಲೂಕು ಪಶುವೈದ್ಯಾಧಿಕಾರಿ ಮಲ್ಲಿಕಾರ್ಜುನ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಸದಾಶಿವ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ಮಂಡಳಿ ಸಹಾಯಕ ನಿರ್ದೇಶಕ ರಮೇಶ್ ಹುರಾಳ್, ತಹಸೀಲ್ದಾರ್ ಮಮತಾ ಭೇಟಿ ನೀಡಿ ಪರಿಶೀಲಿಸಿದರು. ಶಿಕಾರಿಪುರ, ಸೊರಬ ವೈದ್ಯರು ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದರು.

Comments are closed.