ಬೆಂಗಳೂರು: ಇಂದು ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ನಿರೀಕ್ಷಣಾ ಜಾಮೀನು ವಿಚಾರಣೆ ನಡೆಸಿದ 61ನೇ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಅದಾದ ಕೆಲವೇ ನಿಮಿಷಗಳಲ್ಲಿ ಅಲಿ ಖಾನ್ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಿದ್ದಾರೆ.
ಸಿಸಿಬಿ ಬಂಧನ ಭೀತಿಯಿಂದ ಕೋರ್ಟ್ಗೆ ಶರಣಾದ ಅಲಿ ಖಾನ್ಗೆ ನವೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಆಂಬಿಡೆಂಟ್ ಕಿಕ್ಬ್ಯಾಕ್ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು.
ಆಂಬಿಡೆಂಟ್ ಕಂಪನಿ ಜೊತೆಗೆ ಜನಾರ್ದನ ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ಸೆಷನ್ಸ್ ಕೋರ್ಟ್ನಲ್ಲಿ ನಿನ್ನೆ ವಿಚಾರಣೆ ನಡೆದಿತ್ತು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಿದ್ದ ಅಲಿಖಾನ್ ಅವರ ಜಾಮೀನು ರದ್ದು ಕೋರಿ ಸಿಸಿಬಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. ಅದರಂತೆ, ಇಂದು ಅಲಿಖಾನ್ ಜಾಮೀನು ಅರ್ಜಿ ವಜಾಗೊಳಿಸಿತ್ತು.
ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ಗೆ ಮತ್ತೆ ಬಂಧನ ಭೀತಿ ಎದುರಾಗಿತ್ತು. ಅಲಿಖಾನ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುವ ಸಾಧ್ಯತೆ ಇತ್ತು. ಹೀಗಾಗಿ, ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಅಲಿಖಾನ್ ಶರಣಾಗಿದ್ದಾರೆ.
Comments are closed.