ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿದ್ದ ಜನಾರ್ದನ ರೆಡ್ಡಿ ಆಪ್ತ ಆಲಿಖಾನ್ನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಆಲಿಖಾನ್ ಮೇಲೆ ಯಾವುದೇ ದೌರ್ಜನ್ಯ ಎಸಗುವಂತಿಲ್ಲ, ವೈದ್ಯಕೀಯ ಚಿಕಿತ್ಸೆ ಕೊಡಿಸಬೇಕು ಎಂದು ನ್ಯಾಯಾಲಯ ಸಿಸಿಬಿ ಅಧಿಕಾರಿಗಳಿಗೆ ಸೂಚಿಸಿದೆ.
ಆಂಬಿಡೆಂಟ್ನಲ್ಲಿ ಜನಾರ್ಧನ ರೆಡ್ಡಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಅರ್ಜಿ ಸಲ್ಲಿಸಲು ಸಿಸಿಬಿ ತಯಾರಿ ನಡೆಸಿತ್ತು. ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಇದುವರೆಗೆ ಈ ಪ್ರಕರಣದಲ್ಲಿ ಆಲಿಖಾನ್ ವಿಚಾರಣೆ ನಡೆದಿರಲಿಲ್ಲ.
57 ಕೆಜಿ ಚಿನ್ನ ವರ್ಗಾವಣೆ ಹಾಗೂ ಚಿನ್ನದ ಗಟ್ಟಿಯನ್ನು ಹಣಕ್ಕೆ ಬದಲಿಸಿರುವ ಶಂಕೆ ಇತ್ತು. ಹಣ ಮಾರ್ಪಾಡು ಮಾಡಿರುವುದರಲ್ಲಿ ಆಲಿಖಾನ್ ಪಾತ್ರ ಪ್ರಮುಖವಾಗಿತ್ತು ಎಂಬ ಅನುಮಾನ ಇದೆ. ಜೊತೆಗೆ ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಆಲಿಖಾನ್ನ್ನು ಪೊಲೀಸರ ವಶಕ್ಕೆ ನೀಡುವಂತೆ ಮನವಿ ಮಾಡಿ, ಸಿಸಿಬಿ ಪೊಲೀಸರು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇತ್ತ ಆಲಿಖಾನ್ ಪರ ವಕೀಲರು ಸಹ ಅರ್ಜಿ ಸಲ್ಲಿಸಿದ್ದರು.
ಮೊನ್ನೆ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ನಿರೀಕ್ಷಣಾ ಜಾಮೀನು ರದ್ದುಗೊಂಡ ಹಿನ್ನಲೆಯಲ್ಲಿ ಆಲಿಖಾನ್ ಕೋರ್ಟ್ ಗೆ ಶರಣಾಗಿದ್ದ.
Comments are closed.