ಕರ್ನಾಟಕ

ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ದೇವೇಗೌಡರ ಪ್ರತಿಮೆಗೆ ಬೆಂಕಿ

Pinterest LinkedIn Tumblr

ವಿಜಯಪುರ: ಸಿಂಧಗಿಯ ಗೋಲಗೇರಿಯಲ್ಲಿ ಸ್ಥಾಪಿಸಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಸಚಿವ ಎಂ.ಸಿ.ಮನಗೂಳಿ ಅವರ ಕಂಚಿನ ಪುತ್ಥಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗೆ ಕಾರಣವಾದ ಹಿನ್ನಲೆಯಲ್ಲಿ 2014ರಲ್ಲಿ ಉಭಯ ನಾಯಕರ ಪುತ್ಥಳಿಗಳನ್ನು ಜೊತೆಯಲ್ಲಿ ಸ್ಥಾಪಿಸಲಾಗಿತ್ತು.

ಸಿಂಧಗಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜಕೀಯ ದ್ವೇಷಕ್ಕಾಗಿ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ. ಬೆಂಕಿಯಿಂದಾಗಿ ಪುತ್ಥಳಿಗಳು ಕರಕಲಾಗಿವೆ.

Comments are closed.