ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಪುರಂ ವಾರ್ಡಿನ ಪಕ್ಷೇತರ ಸದಸ್ಯ ಏಳುಮಲೈ ಅವರು ತೀವ್ರ ಅನಾರೋಗ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ಗುರುವಾರ ನಸುಕಿನ ಜಾವ 1.30ರ ವೇಳೆಗೆ ವಿಧಿವಶರಾಗಿದ್ದಾರೆ.
ಸಘಾಯ್ಪುರ ವಾರ್ಡ್ನ ಕಾರ್ಪೋರೇಟರ್ ಆಗಿದ್ದ ಏಳುಮಲೈ ಕಳೆದ 1 ತಿಂಗಳ ಹಿಂದೆ ಮೂಗಿನಲ್ಲಿ ಗುಳ್ಳೆಯಾಗಿದೆ ಎಂದು ಆಸ್ಪತ್ರೆಗೆ ತಪಾಸಣೆ ಮಾಡಿಸಲು ಹೋಗಿದ್ದರು. ಆಗ ಅದಕ್ಕೆ ಚಿಕಿತ್ಸೆ ನೀಡಿದ ಬಳಿಕ ಇದ್ದಕ್ಕಿದ್ದಂತೆ ಕೋಮಾ ಸ್ಥಿತಿಗೆ ಹೋಗಿದ್ದರು. ಶಸ್ತ್ರಚಿಕಿತ್ಸೆ ವೇಳೆ ಹೈಡೋಸ್ನ ಅನಸ್ತೇಷಿಯಾ ನೀಡಿದ್ದರಿಂದ ಕೋಮಾಗೆ ಹೋಗಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಏಳುಮಲೈ ಅವರ ಬೆಂಬಲಿಗರು ಮತ್ತು ಕುಟುಂಬಸ್ಥರು ಆರೋಪಿಸಿ, ಗಲಾಟೆ ಮಾಡಿದ್ದರು. 20 ದಿನಗಳ ಕಾಲ ಕೋಮಾದಲ್ಲಿದ್ದ ಕಾರ್ಪೋರೇಟರ್ ಏಳುಮಲೈ ನಿನ್ನೆ ಮಧ್ಯರಾತ್ರಿ ವಿಕ್ರಂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಬಿಬಿಎಂಪಿ ಸಮಾಜ ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಏಳು ಮಲೈ ಅವರು ಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿಸಿದ್ದರು. ಕ್ರಿಯಾಶೀಲ ವ್ಯಕ್ತಿತ್ವದಿಂದಾಗಿ ತಮ್ಮ ವಾರ್ಡ್ನಲ್ಲಿಯೂ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.
Comments are closed.