ಕರ್ನಾಟಕ

ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಸ್ಪದ ಸಾವು

Pinterest LinkedIn Tumblr

ಚಿಕ್ಕಮಗಳೂರು: ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ 22 ವರ್ಷದ ಯುವತಿಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ನಡೆದಿದೆ.

ಸವಿತ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ. ಮೂಲತಃ ಪಂಚನಹಳ್ಳಿ ಗ್ರಾಮದ ಸವಿತಾ ಎರಡು ವರ್ಷದ ಹಿಂದೆ ತಿಮ್ಮಾಪುರ ಗ್ರಾಮದ ರಘು ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮುದ್ದಾದ ಹೆಣ್ಣು ಮಗು ಇದೆ.

ಶನಿವಾರ ತವರು ಮನೆಗೆ ತೆರಳಿದ್ದ ಪತ್ನಿ ಸವಿತಾರನ್ನು ರಘು ಕರೆದುಕೊಂಡು ಬಂದಿದ್ದರು. ಆದರೆ ತಡರಾತ್ರಿ ಏಕಾಏಕಿ ಸವಿತಾ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ್ದ ಸವಿತಾ ಪೋಷಕರು, ಪತಿ ರಘು ಹಾಗೂ ಅವನ ತಾಯಿಯೇ ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಆರೋಪಿಸಿದ್ದಾರೆ.

ಸದ್ಯ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಪಂಚನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Comments are closed.