ಕರ್ನಾಟಕ

ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕುಯ್ದುಕೊಂಡು ವ್ಯಕ್ತಿ ಸಾವು

Pinterest LinkedIn Tumblr


ಬೆಂಗಳೂರು: ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗ ಕುಯ್ದುಕೊಂಡ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಉತ್ತರ ತಾಲೂಕಿನ ಕೊಡಗಿತಿ ರಮಳಪುರ ಗ್ರಾಮದಲ್ಲಿ ಸಂಭವಿಸಿದೆ.

ಕೊಡಗಿ ತಿರುಮಳಪುರದ ನಿವಾಸಿ ನಂಜಪ್ಪ(48) ಮೃತ ವ್ಯಕ್ತಿ. ಈ ಘಟನೆ ನಡೆದ ತಕ್ಷಣ ಅಕ್ಕಪಕ್ಕದ ಜನರು ಬಂದಿದ್ದು, ನಂತರ ಅಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಅಂಬ್ಯುಲೆನ್ಸ್ ಬಂದಿತ್ತಾದ್ರೂ ನಂಜಪ್ಪ ಅದಾಗಲೇ ಮೃತರಾಗಿದ್ದಾನೆ ಎಂದು ವಾಪಸ್ ಹೋಗಿದೆ.

ಮೃತ ನಂಜಪ್ಪ ಮನೆಯಲ್ಲಿ ತರಕಾರಿ ಕೊಯ್ಯುವ ಚಾಕುವಿನಿಂದ ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನ ಕಟ್ಟು ಮಾಡಿಕೊಂಡಿದ್ದಾನೆ. ಬಳಿಕ ತೀವ್ರ ರಕ್ತಸ್ರಾವದಿಂದ ಬಳಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಈ ಘಟನೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಈ ಕುರಿತು ಸೋಲದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.