ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮನೆಗೆ ಬಾಂಬ್ ಇಟ್ಟಿರುವುದಾಗಿ ಹುಸಿ ಬೆದರಿಕೆ ಕರೆ ಮಾಡಿದ್ದ ಯುವಕನನ್ನು ಜೆಪಿ ನಗರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಡಿಸೆಂಬರ್ 16ರಂದು ಪೊಲೀಸರಿಗೆ ಕರೆ ಮಾಡಿ ತಾನು ಸಿಎಂ ಮನೆಗೆ ಬಾಂಬ್ ಇಟ್ಟಿರುವುದಾಗಿ ಹೇಳಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕುಮಾರಸ್ವಾಮಿ ಅವರ ನಿವಾಸದ ಪರಿಶೀಲನೆ ನಡೆಸಿದ್ದರು. ಆದರೆ ಏನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅದೊಂದು ಹುಸಿ ಕರೆ ಎಂಬುದಾಗಿ ತಿಳಿದು ಬಂದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕರೆ ಮಾಡಿದಾತ ತಾನು ಗೋಪಾಲ್ ಎಂಬುದಾಗಿ ಹೇಳಿಕೊಂಡಿದ್ದ. ಬಳಿಕ ದೂರವಾಣಿ ಕರೆಯ ಜಾಡನ್ನು ಹಿಡಿದು ತನಿಖೆ ನಡೆಸಿದ್ದರು. ಕೊನೆಗೂ ಈತ ಕೊಪ್ಪಳ ಮೂಲದ ಮನ್ಸೂರ್ ಎಂಬ ಯುವಕ ಎಂಬುದಾಗಿ ಜೆಪಿ ನಗರ ಪೊಲೀಸರು ಪತ್ತೆಹಚ್ಚಿದ್ದರು. ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
Comments are closed.