ಕರ್ನಾಟಕ

ಚೆನ್ನೈ ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀ ಡಿಸ್ಚಾಜ್೯; ಏರ್​ ಆ್ಯಂಬುಲೆನ್ಸ್​​ ಮೂಲಕ ಬೆಂಗಳೂರಿಗೆ

Pinterest LinkedIn Tumblr


ಚೆನ್ನೈ: ಪಿತ್ತಕೋಶದ ಸೋಂಕು ಉಂಟಾದ್ದರಿಂದ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ಸಿದ್ದಗಂಗಾ ಶ್ರೀಗಳು ಕಳೆದ ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅನೇಕ ಗಣ್ಯರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸಿ ಬಂದಿದ್ದರು. ಈಗ ಅವರ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನತ್ತ ಅವರು ಹೊರಟಿದ್ದಾರೆ.

ಇನ್ನು, ಇಂದು ಸುತ್ತೂರು ಶ್ರೀಗಳು ಆಸ್ಪತ್ರೆಗೆ ಆಗಮಿಸಿದ್ದರು. ‘ಇವತ್ತು ಸಿದ್ದಗಂಗಾ ಮಠದ ಸ್ವಾಮೀಜಿಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದುತ್ತಿದ್ದಾರೆ. ಏರ್​ ಆ್ಯಂಬುಲೆನ್ಸ್​ ಮೂಲಕ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತದೆ’ ಎಂದು ತಿಳಿಸಿದ್ದರು. ಅಂತೆಯೇ ಅವರು ಇಂದು ಬಿಡುಗಡೆ ಹೊಂದಿದ್ದಾರೆ. ಈಗಾಗಲೇ ತುಮಕೂರು ಸಿದ್ದಗಂಗಾ ಮಠದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರುತ್ತಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ಕರೆದೊಯ್ಯಲಾಗಿತ್ತು. ಕಳೆದ 12 ದಿನಗಳಿಂದ ಅವರು ಆಸ್ಪತ್ರೆಯಲ್ಲೇ ರೇಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

Comments are closed.