ಕರ್ನಾಟಕ

ಬೈಕ್‌ಗೆ ಲಾರಿ ಢಿಕ್ಕಿ: ಚಿಕ್ಕೋಡಿ -ಸದಲಗಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಬಲಿ

Pinterest LinkedIn Tumblr


ಚಿಕ್ಕೋಡಿ: ಹುಕ್ಕೇರಿಯ ಹಿಟ್ನಿ ಕ್ರಾಸ್‌ ಬಳಿ ಲಾರಿ ಮತ್ತು ಬೈಕ್‌ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಚಿಕ್ಕೋಡಿ -ಸದಲಗಾ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ದತ್ತು ಹಕ್ಯಾಗೋಳ ಮತ್ತು ಇನ್ನೋರ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಅಪಘಾತದ ತೀವ್ರತೆಗೆ 78 ರ ಹರೆಯದ ದತ್ತು ಅವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಬೈಕ್‌ ರೈಡ್‌ ಮಾಡುತ್ತಿದ್ದ ಈರಪ್ಪ ಗಡೇಕಾರ(50) ಎನ್ನುವವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ದತ್ತು ಅವರು ಬೆಂಬಲಿಗನೊಂದಿಗೆ ನಿಪ್ಪಾಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು.ರಸ್ತೆ ಬದಿ ಬೈಕ್‌ ನಿಲ್ಲಿಸಿ ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಢಿಕ್ಕಿಯಾಗಿ ದುರಂತ ಸಂಭವಿಸಿದೆ.

ದತ್ತು ಅವರು 2004 ರಲ್ಲಿ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಸಂಕೇಶ್ವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.