ಕರ್ನಾಟಕ

ರಾಜ್ಯಕ್ಕೆ ಮುರಳಿಧರ ರಾವ್‌ ಬಿಜೆಪಿ ಚುನಾವಣಾ ಉಸ್ತುವಾರಿ

Pinterest LinkedIn Tumblr


ಹೊಸದಿಲ್ಲಿ: ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಲೋಕಸಭೆ ಚುನಾವಣೆ ಉಸ್ತುವಾರಿಗಳನ್ನು ಬಿಜೆಪಿ ಶನಿವಾರ ನೇಮಕ ಮಾಡಿದೆ.

ಪಕ್ಷದಲ್ಲಿ ರಾಜ್ಯದ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿ.ಮುರಳಿಧರ ರಾವ್‌ ಹಾಗೂ ಶಾಸಕಿ ಕಿರಣ್‌ ಮಾಹೇಶ್ವರಿ ಅವರಿಗೆ ಕರ್ನಾಟಕದ ಹೊಣೆ ನೀಡಲಾಗಿದೆ.

ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಅವರ ಜತೆಗೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರನ್ನು ತಮಿಳುನಾಡು, ಪಾಂಡಿಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳ ಉಸ್ತುವಾರಿಗಳಾಗಿ ನೇಮಕ ಮಾಡಲಾಗಿದೆ.

ಉತ್ತರ ಪ್ರದೇಶಕ್ಕೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ತ್ರಿಪುರಾ ಹಾಗೂ ಜಮ್ಮು-ಕಾಶ್ಮೀರಕ್ಕೆ ಸಂಸದ ಅವಿನಾಶ್‌ ರೈ ಖನ್ನಾ, ದಿಲ್ಲಿಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಜಯರಾಮ್‌ ಸಿಂಗ್‌ ಪಾವಡಾ ಅವರನ್ನು ನೇಮಕ ಮಾಡಲಾಗಿದೆ.

Comments are closed.