ಕರ್ನಾಟಕ

ಹಾಡಹಗಲೇ ನಡುರಸ್ತೆಯಲ್ಲೇ ಲಾಡ್ಜ್ ಮ್ಯಾನೇಜರ್‌ನ ಬರ್ಬರ ಹತ್ಯೆ

Pinterest LinkedIn Tumblr


ಕಲಬುರಗಿ: ನಗರದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ನಡೆದಿದ್ದು, ನೂರಾರು ಜನರು ಹತ್ಯೆ ಕಂಡು ಬೆಚ್ಚಿ ಬಿದ್ದಿದ್ದಾರೆ.

ಮೇಲ್ಕುಂದ ನಿವಾಸಿ ಮಲ್ಲಿಕಾರ್ಜುನ ಎನ್ನುವ ವ್ಯಕ್ತಿ ಹತ್ಯೆಗೀಡಾಗಿದ್ದು, ಲಾಡ್ಜ್ವೊಂದರಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಾತ್ರಿ ಪಾಳಿ ಕೆಲಸ ಮುಗಿಸ ಮನೆಗೆ ತೆರಳುತ್ತಿದ್ದ ವೇಳೆ ಹೊಂಚು ಹಾಕಿ ಕುಳಿತ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿ ಮನ ಬಂದಂತೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲೇ ಹತ್ಯೆಗೈದಿದ್ದಾರೆ.

ಹಳೇ ವೈಷಮ್ಯದ ಹಿನ್ನಲೆಯಲ್ಲಿ ಹತ್ಯೆ ನಡೆದಿದೆ ಎಂದು ಶಂಕಿಸಲಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Comments are closed.