ಕರ್ನಾಟಕ

ಜನತೆಯ ಕೃಪೆ ನನ್ನ ಮೇಲೆ ಇರುವ ತನಕ ಕಲ್ಲು ಬಂಡೆ ತರಹ ಇರುತ್ತೇನೆ: ಕುಮಾರಸ್ವಾಮಿ

Pinterest LinkedIn Tumblr


ನಾಗಮಂಗಲ: ದೇವರ ಆಶೀರ್ವಾದ, ಜನರ ಕೃಪೆ ನನ್ನ ಮೆಲಿರುವವರೆಗೆ ನನಗೆ ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಆದಿಚುಂಚನಗಿರಿಯಲ್ಲಿ ನಡೆದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 74ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಅನೇಕ ಬೆಳವಣಿಗೆಗಳು ನಡೆದಿವೆ. ಮಾಧ್ಯಮಗಳು ರಾಜಕೀಯವಾಗಿ ನನ್ನ ಹಾಗೂ ಸರ್ಕಾರದ ಬಗ್ಗೆ ಅನೇಕ ವರದಿ ಪ್ರಕಟಿಸಲಿ. ಆದರೆ, ನಿರ್ಮಲಾನಂದನಾಥ ಸ್ವಾಮೀಜಿ ಹೆಸರನ್ನು ಪ್ರಸ್ತಾಪಿಸಬೇಡಿ. ಭಗವಂತ ಎಷ್ಟು ದಿನ ಮುಖ್ಯಮಂತ್ರಿ ಆಗಿರಬೇಕು ಎಂದು ಬರೆದಿದ್ದಾನೆಯೋ ಅಷ್ಟು ದಿನ ಅಧಿಕಾರದಲ್ಲಿ ಇರುತ್ತೇನೆ. ಆದರೆ, ಎಂದಿಗೂ ಅಧಿಕಾರ ಕಳೆದುಕೊಳ್ಳುತ್ತೇನೆ ಎಂದು ನಾನು ಕುಗ್ಗಿಲ್ಲ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಸಮಾಜದ ರಕ್ಷಣೆಗಾಗಿ ಶ್ರೀಗಳು ಎಲ್ಲಾ ರೀತಿಯ ಒಳಿತನ್ನು ಮಾಡುತ್ತಿದ್ದಾರೆ. ಆದರೆ ಅವರೆಂದೂ ಸಮಾಜದ ಓರ್ವ ವ್ಯಕ್ತಿಯ ಪರವಾಗಿ ಮಾತನಾಡುವುದಿಲ್ಲ. ಅವರ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಹೇಳಿದರು.

Comments are closed.