ಬೆಂಗಳೂರು: ಬಿಡದಿಯ ಈಗಲ್ಟನ್ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿ ಪ್ರಕರಣ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆ. ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಕಣ್ಮರೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಬಂಧನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಇದೇ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಶೀಘ್ರದಲ್ಲಿಯೇ ಗಣೇಶ್ನನ್ನು ಬಂಧಿಸುವುದಾಗಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಕಂಪ್ಲಿ ಗಣೇಶ್ ಮೇಲೆ ಎಫ್ ಐಆರ್ ದಾಖಲಾಗಿದೆ. ಪೊಲೀಸರು ಅವರ ಕೆಲಸ ಮಾಡ್ತಿದ್ದಾರೆ. ಅವರನ್ನು ರೆಸಾರ್ಟ್ನಿಂದ ಹೊರಕಳಿಸಿ ಎಫ್ಐಆರ್ ಮಾಡಿಲ್ಲ. ಅವರನ್ನು ರೆಸಾರ್ಟ್ನಿಂದ ಹೊರಕಳಿಸಿ ಎಫ್ಐಆರ್ ಮಾಡಿಲ್ಲ. ಅರೆಸ್ಟ್ ಆಗಿಲ್ಲ ಅಂದ್ರೆ ಸುಮ್ನೆ ಕೂತಿದ್ದಾರೆ ಅಂತಲ್ಲ. ಇದರಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ. ಸರ್ಕಾರ, ಇಲಾಖೆ ಸುಮ್ಮನೆ ಕೂತಿಲ್ಲ. ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಶೀಘ್ರದಲ್ಲಿಯೇ ಶಾಸಕ ಗಣೇಶ್ನನ್ನು ಬಂಧಿಸಲಾಗುವುದು. ಶಾಸಕ ಗಣೇಶ್ ಮೇಲೆ ರೌಡಿಶೀಟರ್ ಓಪನ್ ಮಾಡುವ ಬಗ್ಗೆ ಇಲಾಖೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಔರಾದ್ಕರ್ ವರದಿ ಜಾರಿ ವಿಚಾರವಾಗಿಯೂ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಬಳಿ ಚರ್ಚೆ ಮಾಡಿದ್ದೇನೆ. ವರದಿ ಜಾರಿ ಮಾಡಲು ಪ್ರಯತ್ನ ಮಾಡುತ್ತೇವೆ. ಬಜೆಟ್ನಲ್ಲಿ ವರದಿ ಅಂಶಗಳನ್ನ ಸೇರಿಸಿದ್ದೇವೆ. ಸಾಧ್ಯವಾದಷ್ಟು ವರದಿಯಲ್ಲಿನ ಎಲ್ಲಾ ಅಂಶಗಳನ್ನೂ ಜಾರಿ ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದರು.
Comments are closed.