ಕರ್ನಾಟಕ

ಮುಸ್ಲಿಂ ಮಹಿಳೆ ಹಿಂದೆ ಓಡಿದ್ದು ನಿಮ್ಮ ಸಾಧನೆ: ದಿನೇಶ್ ಗುಂಡುರಾವ್ ಗೆ ಟ್ವೀಟ್ ಟಾಂಗ್ ಕೊಟ್ಟ ಅನಂತ್ ಕುಮಾರ್ ಹೆಗಡೆ

Pinterest LinkedIn Tumblr

ಬೆಂಗಳೂರು: ಪ್ರತಿ ಬಾರಿಯೂ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ನಿನ್ನೆ ಕೂಡ ಒಂದು ವಿವಾದಾತ್ಮಕ ಹೇಳಿಕೆ ನೀಡಿದ್ದು ಮತ್ತೆ ಟ್ವೀಟ್ ಮೂಲಕ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಮತ್ತೊಂದು ಹೇಳಿಕೆ ನೀಡಿ ವಿವಾದ ಸ್ರಷ್ಟಿಸಿದ್ದಾರೆ.

ಹಿಂದೂ ಹುಡುಗಿಯನ್ನು ಮುಟ್ಟಿದರೆ ಅವರ ಕೈಯನ್ನೇ ಇಲ್ಲದಂತೆ ಮಾಡಿ ಎಂದು ಹಿಂದೂ ಜಾಗರಣ ವೇದಿಕೆಯಲ್ಲಿ ಮಾತನಾಡಿದ್ದ ಅನಂತ್ ಕುಮಾರ್ ಗೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದ ದಿನೇಶ್ ಗುಂಡೂರಾವ್ ಕೇಂದ್ರ ಸಚಿವರಾಗಿ ಅಥವಾ ಸಂಸದರಾಗಿ ನಿಮ್ಮ ಸಾಧನೆ ಏನು, ಕರ್ನಾಟಕ ಅಭಿವೃದ್ಧಿಗೆ ನಿಮ್ಮ ಕೊಡುಗೆ ಏನು ಇಂಥವರು ಸಂಸದರಾಗಿ ಆಯ್ಕೆಯಾಗುತ್ತಿರುವುದು ಶೋಚನೀಯ ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಹೆಗಡೆ, “ಈ ವ್ಯಕ್ತಿ ಕೇಳಿದ ಪ್ರಶ್ನೆಗೆ ನಾನು ಉತ್ತರಿಸುತ್ತಿದ್ದೇನೆ. ನಿಮ್ಮ ಸಾಧನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಬಹಿರಂಗಪಡಿಸಿ. ನೀವು ಓರ್ವ ಮುಸ್ಲಿಂ ಮಹಿಳೆ ಹಿಂದೆ ಓಡಿ ಹೋದ ವ್ಯಕ್ತಿ ಎಂಬುದಷ್ಟೇ ನನಗೆ ಗೊತ್ತು ಎಂದಿದ್ದಾರೆ.

Comments are closed.